ಬೆಳ್ತಂಗಡಿ: ಕನ್ಯಾಡಿ -1 ಗ್ರಾಮದ ಗುರಿಪಳ್ಳ ಏಣೀರು ನಿವಾಸಿ ಕೃಷ್ಣಪ್ಪ ಕರ್ಕೇರ(85) ಅಲ್ಪಕಾಲದ ಅಸೌಖ್ಯದಿಂದ ಸೆ. 16ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.
ಪ್ರಗತಿಪರ ಕೃಷಿಕರಾಗಿದ್ದ ಅವರು ನಿಡಿಗಲ್ ಶ್ರೀಲೋಕನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾಗಿ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.
ಗುರಿಪಳ್ಳದ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಹಾಗೂ ಸ್ಥಳೀಯ ಹಲವು ಸಂಘ ಸಂಸ್ಥೆಗಳಲ್ಲಿ ಪ್ರಮುಖರಾಗಿ ಕಾರ್ಯ ನಿರ್ವಹಿಸಿದ್ದರು. ಅವರಿಗೆ ಪತ್ನಿ ನಾಲ್ವರು ಪುತ್ರರು ಹಾಗೂ ಪುತ್ರಿ ಇದ್ದಾರೆ.