ಬೆಳ್ತಂಗಡಿ; ಕಾರ್ತಿಕ ಮಾಸದ ಬಹುಳ ಏಕಾದಶಿಯಿಂದ ಅಮಾವಾಸ್ಯೆಯವರೆಗೆ ನಡೆದ ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮ ಬುಧವಾರ ಶ್ರೀ ಸ್ವಾಮಿಯ ಗೌರಿಮಾರು ಕಟ್ಟೆ ಉತ್ಸವದಲ್ಲಿನ ಬೆಳ್ಳಿ ರಥೋತ್ಸವದೊಂದಿಗೆ ಸುಸಂಪನ್ನಗೊಂಡಿತು.
ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರು ಹಾಗು ಕುಟುಂಬಸ್ಥರು ರಥೋತ್ಸವದಲ್ಲಿ ಪಾಲ್ಗೊಂಡರು. ದೀಪೋತ್ಸವಲ್ಲಿ ನಾಡಿನಾದ್ಯಂತದ ಲಕ್ಷಾಂತರ ಮಂದಿ ಭಾಗಿಯಾಗಿ ಸ್ವಾಮಿಯ ದರ್ಶನ ಪಡೆದರಲ್ಲದೆ ಕ್ಷೇತ್ರದಲ್ಲಿನ ಸಾಂಸ್ಕೃತಿಕ, ಮನರಂಜನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.