ಬೆಳ್ತಂಗಡಿ: ಚಾತುರ್ಮಾಸ್ಯ ವ್ರತದಲ್ಲಿರುವ ಧರ್ಮಸ್ಥಳ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಗುರುದೇವ ಮಠದ ಶ್ರೀ ಬ್ರಹಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆಯಲು ಶುಕ್ರವಾರ ಕೆ.ಪಿ.ಸಿ.ಸಿ. ಉಪಾಧ್ಯಕ್ಷ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಆಗಮಿಸಿದರು.
ಚಾತುರ್ಮಾಸ್ಯ ಪವಿತ್ರ ಪರ್ವಕಾಲದಲ್ಲಿ ಗುರು ಪಾದುಕಾ ಪೂಜೆ ನೇರವೇರಿಸಿ ಗುರುಗಳಿಂದ ಆರ್ಶಿವಾದ ಪಡೆದುಕೊಂಡರು.
ಈ ಸಂಧರ್ಭದಲ್ಲಿ ಕ್ಷೇತ್ರದ ಶಾಸಕರು ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಹರೀಶ್ ಪೂಂಜ ರವರು ಸ್ವಾಗತ ಕೋರಿದರು. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಹಾಗೂ ಬೆಸ್ಟ್ ಪೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಮ್, ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೈಲೇಶ್ ಕುಮಾರ್ ಕುರ್ತೊಡಿ ಹಾಗೂ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ನ.ಪಂ.ಸದಸ್ಯ ಜಗದೀಶ್ ಉಪಸ್ಥಿತರಿದ್ದರು.