News Karnataka Kannada
Monday, May 06 2024
ಮಂಗಳೂರು

ಬೆಳ್ತಂಗಡಿ: ತಾಲ್ಲೂಕಿನ ಶೌರ್ಯ ಸಮಿತಿಗೆ ಮಾಸ್ಟರ್ ಮತ್ತು ಕ್ಯಾಪ್ಟನ್ ಆಯ್ಕೆ

Blt
Photo Credit : By Author

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಪ್ರಾಕೃತಿಕ ದುರಂತಗಳ ನಿರ್ವಹಣೆಗೆಂದು ಆರಂಭಿಸಿದ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮವು ರಾಜ್ಯದ 11 ಜಿಲ್ಲೆಗಳ 62 ತಾಲ್ಲೂಕುಗಳಲ್ಲಿ ವಿಸ್ತಾರಗೊಂಡಿದೆ ಎಂದು ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿ. ಪಾಸ್ ಹೇಳಿದರು.

ಬೆಳ್ತಂಗಡಿಯ ಶ್ರೀ ಮಂಜುನಾಥೇಶ್ವರ ಸಭಾಭವನದಲ್ಲಿ ನಡೆದ ಬೆಳ್ತಂಗಡಿ ಹಾಗೂ ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಯ ಮಾಸಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬೆಳ್ತಂಗಡಿ ತಾಲ್ಲೂಕಿನಲ್ಲಿ ಕಳೆದ ಎರಡುವರೆ ವರ್ಷದ ಹಿಂದೆ ಆರಂಭಿಸಲಾದ ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮದಲ್ಲಿ 8620 ಸ್ವಯಂಸೇವಕರು ಸೇರ್ಪಡೆಗೊಂಡಿದ್ದಾರೆ ಎಂದರು.

ಮುಂದಿನ ಐದು ವರ್ಷಗಳಲ್ಲಿ 20 ಸಾವಿರ ಸ್ವಯಂಸೇವಕರು ಸೇರ್ಪಡೆಗೊಳ್ಳಲಿದ್ದಾರೆ. ಮಳೆಗಾಲದಲ್ಲಿ ವಿಪತ್ತು ನಿರ್ವಹಣಾ ಚಟುವಟಿಕೆಗಳಲ್ಲಿ ಸ್ವಯಂಸೇವಕರು ಸಕ್ರಿಯವಾಗಿ ತೊಡಗಿಸಿಕೊಂಡು ಉಳಿದ ದಿನಗಳಲ್ಲಿ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಕೊಂಡು ತಮ್ಮ ಗ್ರಾಮದ ವ್ಯಾಪ್ತಿಯಲ್ಲಿ ಆಪತ್ ಕಾಲದ ಬಾಂಧವರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಇದುವರೆಗೆ ಸ್ವಯಂಸೇವಕರು 53,800 ಸೇವಾ ಚಟುವಟಿಕೆಗಳನ್ನು ಮಾಡಿದ್ದಾರೆ. ವಿಪತ್ತು ನಿರ್ವಹಣೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ 6380 ಕಾರ್ಯಕ್ರಮಗಳನ್ನು ಮಾಡಿದ್ದಾರೆ. ವಿಪತ್ತು ನಿರ್ವಹಣೆ ಘಟಕಗಳ ಸ್ವಯಂಸೇವಕರ ಸೇವಾ ಚಟುವಟಿಕೆಗಳನ್ನು ಗಮನಿಸಿದ ಮಾತೃಶ್ರೀ ಡಾ.ಹೇಮಾವತಿ ಹೆಗ್ಗಡೆಯವರು ಶೌರ್ಯ ಎನ್ನುವ ಹೆಸರನ್ನು ನೀಡಿದ್ದಾರೆ ಎಂದರು.

ಬೆಳ್ತಂಗಡಿ ತಾಲ್ಲೂಕಿನ ಸ್ವಯಂಸೇವಕರಿಗೆ ಶೌರ್ಯ ಘಟಕಗಳ ಬಲವರ್ಧನೆ, ಗುಣಮಟ್ಟದ ಸೇವಾಕಾರ್ಯಗಳ ಆಯೋಜನೆ, ವಿಪತ್ತು ನಿರ್ವಹಣಾ ಚಟುವಟಿಕೆಗಳಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಮಾಹಿತಿ ನೀಡಿದರು. ಬೆಳ್ತಂಗಡಿ ವಿಪತ್ತು ನಿರ್ವಹಣಾ ಸಮಿತಿಗೆ ಎರಡು ಲಕ್ಷ ರೂಪಾಯಿ ಮೌಲ್ಯದ ಪರಿಕರಗಳನ್ನು ಯೋಜನೆಯಿಂದ ನೀಡಲಾಗಿದ್ದು ವಿಪತ್ತು ನಿರ್ವಹಣಾ ಚಟುವಟಿಕೆಗಳಲ್ಲಿ ಬಳಸಿಕೊಳ್ಳುವಂತೆ ಸಲಹೆ ನೀಡಿದರು.

ವಿಪತ್ತು ನಿರ್ವಹಣಾ ಸಮಿತಿಯು ಸ್ವತಂತ್ರವಾಗಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ನಿಟ್ಟಿನಲ್ಲಿ ತಾಲ್ಲೂಕಿಗೆ ಓರ್ವ ಮಾಸ್ಟರ್ ಹಾಗೂ ಕ್ಯಾಪ್ಟನ್ ಆಯ್ಕೆ ಮಾಡಲಾಗುತ್ತಿದ್ದು ಇವರು ಸರ್ಕಾರದ ವಿವಿಧ ಇಲಾಖೆಗಳೊಂದಿಗೆ ಸಂಪರ್ಕದಲ್ಲಿ ಇದ್ದು, ಸ್ಥಳೀಯವಾಗಿ ನಡೆಯುವ ಘಟನೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ವಿಪತ್ತು ನಿರ್ವಹಣೆಗೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಗುರುವಾಯನಕೆರೆ ಹಾಗೂ ಬೆಳ್ತಂಗಡಿ ಸಮಿತಿಗಳಿಗೆ ಮಾಸ್ಟರ್ ಹಾಗೂ ಕ್ಯಾಪ್ಟನ್ ಆಯ್ಕೆ ಮಾಡಲಾಯಿತು. ಗುರುವಾಯನಕೆರೆಯ ವಿಪತ್ತು ನಿರ್ವಹಣಾ ಸಮಿತಿಗೆ ಮಾಸ್ಟರ್ ಆಗಿ ಶ್ರೀಕಾಂತ್ ಪಟವರ್ಧನ್ ಹಾಗೂ ಕ್ಯಾಪ್ಟನ್ ಆಗಿ ಸತೀಶ್ ಆಚಾರ್ಯ ಇವರನ್ನು ಹಾಗೂ ಬೆಳ್ತಂಗಡಿ ಸಮಿತಿಯ ಮಾಸ್ಟರ್ ಆಗಿ ಸ್ನೇಕ್ ಪ್ರಕಾಶ್ ಹಾಗೂ ಕ್ಯಾಪ್ಟನ್ ಆಗಿ ಸಂತೋಷ್ ಬೆಳಾಲು ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಪಾಲ್ಗೊಂಡ ಎಲ್ಲಾ ಸ್ವಯಂಸೇವಕರಿಗೆ ಸಮವಸ್ತ್ರವನ್ನು ವಿತರಣೆ ಮಾಡಲಾಯಿತು. ಒಂದು ಟೀ ಶಟ್ ಹಾಗೂ ಪ್ಯಾಂಟ್ ವಿತರಣೆ ಮಾಡಲಾಯಿತು. ಬೆಳ್ತಂಗಡಿ ಯೋಜನಾಧಿಕಾರಿ ಸುರೇಂದ್ರ ಕುಮಾರ್, ಗುರುವಾಯನಕೆರೆ ಯೋಜನಾಧಿಕಾರಿ ಯಶವಂತ್, ವಿಪತ್ತು ನಿರ್ವಹಣಾ ಯೋಜನಾಧಿಕಾರಿ ಜೈವಂತ ಪಟಗಾರ್, ಎಲ್ಲಾ ಘಟಕಗಳ ಸಂಯೋಜಕರು, ಘಟಕ ಪ್ರತಿನಿಧಿಗಳು, ಘಟಕ ಸೇವಾಪ್ರತಿನಿಧಿಗಳು, 263 ಸ್ವಯಂಸೇವಕರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು