ಬೆಳ್ತಂಗಡಿ: ಧರ್ಮಸ್ಥಳ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಗುರುದೇವ ಮಠದಲ್ಲಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತದ 44ನೇ ದಿನವಾದ ಆ.24 ರಂದು ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ ಪಾದುಕಾ ಪೂಜೆ ನೆರವೇರಿಸಿದರು.
ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ರಾಜ್ಯ ಬಿಜೆಪಿ ವಕ್ತಾರ ವಿಕಾಸ್ ಪುತ್ತೂರು, ಕಾರ್ಪೊರೇಟರ್ ಗಳಾದ ವರುಣ್ ಚೌಟ, ಕಿರಣ್ ಕುಮಾರ್, ಜಯಾನಂದ ಅಂಚನ್, ಮನೋಜ್ ಕುಮಾರ್, ಮಂಡಲ ಉಪಾಧ್ಯಕ್ಷ ವಿಠಲ್ ಸಾಲಿಯಾನ್, ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ, ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲ, ಉಜಿರೆ ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ, ಬೆಳ್ತಂಗಡಿ ಜೇಸಿ ಅಧ್ಯಕ್ಷ ಪ್ರಸಾದ್ ಬಿ. ಎಸ್., ಉಜಿರೆಯ ವರ್ತಕರಾದ ರಾಜೇಶ್ ಪೈ, ಹುಕುಂ ರಾಮ್ ಪಾಟೀಲ್,ಸುಖ್ ರಾಮ್ ಪಾಟೀಲ್,ಕೆ. ಸಂಜೀವ,ಗೋವಿಂದ ಎಸ್. ನಾಯ್ಕ ಹೊನ್ನಾವರ ಇನ್ನಿತರರು ಉಪಸ್ಥಿತರಿದ್ದು ಗುರುಗಳ ಆಶೀರ್ವಾದ ಪಡೆದುಕೊಂಡರು.
ಉಜಿರೆ ಗ್ರಾಮದ ಮಾತೃ ಮಂಡಳಿ ಭಜನಾ ಮಂಡಳಿ ಮತ್ತು ಮಾಚಾರು ಬದನಾಜೆ ಶ್ರೀ ಲಕ್ಷ್ಮಿ ನಾರಾಯಣ ಭಜನಾ ಮಂಡಳಿ ಸದಸ್ಯರಿಂದ ಭಜನೆ ನಡೆಯಿತು.