News Karnataka Kannada
Wednesday, May 01 2024
ಮಂಗಳೂರು

ಬೆಳ್ತಂಗಡಿ: “ನಮ್ಮ ಪ್ರಧಾನಿಗ್ ತುಳುವೆರೆ ಪೋಸ್ಟ್ ಕಾರ್ಡ್ ಅಭಿಯಾನ” ಕ್ಕೆ ಚಾಲನೆ

Belthangady: "Namma Pradhan Mantrig Tuluvere Postcard Campaign" launched
Photo Credit :

ಬೆಳ್ತಂಗಡಿ: ತುಳು ಬಾಷೆಗೆ ಮಾನ್ಯತೆ ಸಿಗಬೇಕು ಮತ್ತು ತುಳು ಭಾಷೆಯನ್ನು 8ನೇ ಪರಿಚ್ಚೇದಕ್ಕೆ ಸೇರಿಸಬೇಕು ಎಂಬ ತುಳುವರ ಬೇಡಿಕೆಯನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಪೋಸ್ಟ್ ಕಾರ್ಡ್ ಮೂಲಕ ತಿಳಿಸುವ ವಿಭಿನ್ನ ಯೋಜನೆಯನ್ನು ತುಳುವೆರೆ ಕುಡ್ಲ (ರಿ) ತುಳು ಸಂಘಟನೆ ,ತುಳುನಾಡು ವಾರ್ತೆ ವಾರ ಪತ್ರಿಕೆ ಮತ್ತು ನಮ್ಮ ಟಿ.ವಿ ಸಹಯೋಗದಲ್ಲಿ ಸೆ. 1ನೇ ಗುರುವಾರ ತುಳುನಾಡಿನ ತುತ್ತ ತುದಿಯಾದ ಬೆಳ್ತಂಗಡಿ ತಾಲೂಕಿನ “ಬಂಜಾರು ಮಲೆ” ಎಂಬ ಪ್ರದೇಶದಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದೆ.

ಈ ಅಭಿಯಾನವು 1ಲಕ್ಷಕ್ಕೂ ಅಧಿಕ ಪೋಸ್ಟ್ ಕಾರ್ಡ್ ತುಳುನಾಡಿನ ಜನತೆಯಿಂದ ಬರೆಯಿಸಿ ಕಳುಹಿಸುವ ಗುರಿಯನ್ನು ಹೊಂದಿದ್ದು. ಈಗಾಗಲೇ ಅಭಯಾನಕ್ಕೆ ಹಲವು ಸಂಘಟನೆಗಳ ಬೆಂಬಲ ದೊರೆತಿದೆ. ಅಭಿಯಾನದ ಆಯೋಜಕರುಗಳು ತುಳುನಾಡಿನ ಎಲ್ಲಾ ರಾಜಕೀಯ, ಧಾರ್ಮಿಕ ಮತ್ತು ಎಲ್ಲಾ ಸಂಘಟನೆಗಳಿಗೆ ಈ ಅಭಿಯಾನದಲ್ಲಿ ನಮ್ಮೊಂದಿಗೆ ಕೈ ಜೋಡಿಸುವಂತೆ ವಿನಂತಿ ಮಾಡಿದೆ. ಹೆಚ್ಚಿನ ಮಾಹಿತಿಗಾಗಿ 9845858594 ಮೊಬೈಲ್ ನಂಬರನ್ನು ಸಂಪರ್ಕಿಸಿ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು