ಬೆಳ್ತಂಗಡಿ: ಕಾಯರ್ತಡ್ಕದಿಂದ ಕುದುರಾಯಕ್ಕೆ ಬರುತ್ತಿದ್ದ ಜೀಪೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ಸಂಭವಿಸಿದೆ.
ಕಾಯರ್ತಡ್ಕದಿಂದ ಬರುತ್ತಿದ್ದ ಜೀಪು ಬರಂಗಾಯ ಸಮೀಪ ಚಾಲಕ ದುಡುಕತನದಿಂದ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ.
ಜೀಪಿನಲ್ಲಿ ಪ್ರಯಾಣಿಸುತ್ತಿದ್ದ ಮಂಜಪ್ಪ, ಗುರುವ, ಯಮುನ,ಸಂತೋಷ್ ಎಂಬವರು ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ. ಜೀಪು ಸಂಪೂರ್ಣವಾಗಿ ನುಜ್ಜು ಗುಜ್ಜಾಗಿದೆ. ಘಟನೆಯ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.