ಬೆಳ್ತಂಗಡಿ: ವಾಹನವೊಂದರಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಸ್ಥಳೀಯರ ಸಹಕಾರದಲ್ಲಿ ಪೊಲೀಸರು ಹಿಡಿದ ಘಟನೆ ನಡ ಗ್ರಾಮದ ನರಸಿಂಹ ಗಡ ರಸ್ತೆಯಲ್ಲಿ ನಡೆದಿದೆ.
ಕ್ವಾಲೀಸ್ ವಾಹನವೊಂದು ಸಂಶಯಸ್ಪದವಾಗಿ ಸಂಚರಿಸುತ್ತಿದ್ದ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ವಾಹನವನ್ನು ನಿಲ್ಲಿಸಲು ಸೂಚಿಸಿದರೂ ಪೊಲೀಸರ ಮೇಲೆಯೇ ವಾಹನ ಚಲಾಯಿಸಿ ತಪ್ಪಿಸಿಕೊಳ್ಳಲು ಪ್ರಯತ್ನ ಪಟ್ಟಾಗ ಸ್ಥಳೀಯರ ಸಹಕಾರದಲ್ಲಿ ಪೊಲೀಸರು ವಾಹನವನ್ನು ತಡೆದಿದ್ದಾರೆ .ಆಗ ಚಾಲಕ ತಪ್ಪಿಸಿಕೊಂಡಿದ್ದು 3 ಮಂದಿ ಆರೋಪಿಗಳು ಸಿಕ್ಕಿಹಾಕಿಕೊಂಡಿದ್ದಾರೆ.
ವಾಹನದಲ್ಲಿ ಎರಡು ದನ ,ಒಂದು ಕರುವನ್ನು ಹಿಂಸಾತ್ಮಕ ರೀತಿಯಲ್ಲಿ ಗುರುವಾಯನಕೆರೆ ಬಳಿಯ ಪಿಲಿಚಂಡಿ ಕಲ್ಲು ಎಂಬಲ್ಲಿಯ ಕಸಾಯಿಖಾನೆಗೆ ಸಾಗಿಸಲು ಯತ್ತಿಸುತ್ತಿದ್ದರು. ಒಳ ರಸ್ತೆಯ ಮೂಲಕ ಲಾಯಿಲ ಮುಂಡೂರು ರಸ್ತೆಯಲ್ಲಿ ಸಾಗಿಸಲು ಪ್ಲ್ಯಾನ್ ಮಾಡಿದ್ದರು ಎಂದು ತಿಳಿದು ಬಂದಿದೆ.
ರಾಜ್ಯದಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದಾಗಿದ್ದು, ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಈ…
ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ…
ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.
ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…
ಆನ್ಲೈನ್ ಪಾರ್ಟ್ಟೈಮ್ ಕೆಲಸ ಹಾಗೂ ಆನ್ಲೈನ್ ಟ್ರೇಡಿಂಗ್ ಮೇಸೆಜ್ ನ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…
ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.