ಬೆಳ್ತಂಗಡಿ: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ ) ಮಂಗಳೂರು, ಬಂಟರ ಯಾನೆ ನಾಡವರ ಮಾತೃ ಸಂಘ (ರಿ ) ಮಂಗಳೂರು, ಬಂಟರ ಸಂಘ ಬೆಂಗಳೂರು ಇವುಗಳ ಸಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣಾ ಸಮಾರಂಭ ಸೆ. 4 ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆಯಿತು.
ಬೆಂಗಳೂರು ಬಂಟರ ಸಂಘ ದ ನಿಕಟಪೂರ್ವ ಅಧ್ಯಕ್ಷ ಉಪೇಂದ್ರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ,ಶುಭ ಕೋರಿದರು.
ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಜಯರಾಮ ಶೆಟ್ಟಿ ಮುಂಡಾಡಿಗುತ್ತು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಸಾಧಕರಿಗೆ ಗೌರವರ್ಪಣೆ
ಇದೆ ಸಂದರ್ಭದಲ್ಲಿ ಕುಸ್ತಿ ಪಂದ್ಯಾಟದಲ್ಲಿ ವಿಶೇಷ ಸಾಧನೆಗೈದ ಗಗನ್ ಸಿ. ಶೆಟ್ಟಿ ಮಚ್ಚಿನ , ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಶ್ರೀಮತಿ ದಿಶಾರಾಘ ಶೆಟ್ಟಿ – ಧರ್ಮಸ್ಥಳ ಅವರನ್ನು ವಿಶೇಷವಾಗಿ ಸನ್ಮಾನಿಸಿ ಪು ರಸ್ಕರಿಸಲಾಯಿತು . . ಕಳೆದ ಸಾಲಿನ ಎಸ್. ಎಸ್. ಎಲ್. ಸಿ ಮತ್ತು ಪಿಯುಸಿಯಲ್ಲಿ ಶೇಕಡಾ 90% ಕ್ಕಿಂತ ಹೆಚ್ಚು ಅಂಕ ಪಡೆದ ಸಮಾಜದ 35 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಂಘದಲ್ಲಿ ಈ ವರೆಗೆ ಸೇವೆ ಸಲ್ಲಿಸುತ್ತಿದ್ದ ಬಾಬು ಶೆಟ್ಟಿ ಯವರ ಸೇವೆಯನ್ನುಸ್ಮರಿಸಿ ಅವರನ್ನು ಬೀಳ್ಕೊಡಲಾಯಿತು. ಒಟ್ಟು 163 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಿಸಲಾಯಿತು.
ವೇದಿಕೆಯಲ್ಲಿ ಬೆಂಗಳೂರು ಬಂಟರ ಸಂಘದ ಸದಾನಂದ ಸುಲಾಯಿ, ರಾಜೇಶ್ ಶೆಟ್ಟಿ ಕುತ್ಯಾರು, ಮಾತೃ ಸಂಘದ ತಾಲೂಕು ಸಂಚಾಲಕ ರಘುರಾಮ ಶೆಟ್ಟಿ ಸಾಧನ, ಜಾಗತಿಕ ಬಂಟರ ಸಂಘದ ನಿರ್ದೇಶಕ ಜಯಂತ್ ಶೆಟ್ಟಿ ಕುಂಟಿನಿ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಎಸ್. ಜಯರಾಮ ಶೆಟ್ಟಿ ಪಡಂಗಡಿ, ಸಂಘದ ಉಪಾಧ್ಯಕ್ಷ ಕೆ. ವಿಠಲ ಶೆಟ್ಟಿ ಕೊಲ್ಲೊಟ್ಟು, ಕಾರ್ಯದರ್ಶಿ ಸಂಜೀವ ಶೆಟ್ಟಿ ಕುಂಟಿನಿ, ಕೋಶಾಧಿಕಾರಿ ಕೆ. ಎನ್.ಆನಂದ ಶೆಟ್ಟಿ ಐಸಿರಿ, ಜತೆ ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ, ಯುವ ವಿಭಾಗದ ಅಧ್ಯಕ್ಷ ಸುಜಯ್ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ಶ್ರೀಮತಿ ಶೋಭಾ ವಿ. ಶೆಟ್ಟಿ, ವಿದ್ಯಾರ್ಥಿನಿಧಿ ಸಂಚಾಲಕ ವಿಠ್ಠಲ ಶೆಟ್ಟಿ ಉಜಿರೆ. ಮೊದಲಾದವರು ಉಪಸ್ಥಿತರಿದ್ದರು . ಮಮತಾ ಶೆಟ್ಟಿ ಪ್ರಾರ್ಥಿಸಿ,ಉಪಾಧ್ಯಕ್ಷ ವಿಠಲ ಶೆಟ್ಟಿ ಕೊಲ್ಲೊಟ್ಟು ಸ್ವಾಗತಿಸಿ,ಪ್ರಸ್ತಾವಿಸಿದರು. ಜತೆ ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ ವಂದಿಸಿದರು. ವಸಂತ ಶೆಟ್ಟಿ ಶ್ರದ್ಧಾ ಕಾರ್ಯಕ್ರಮ ನಿರೂಪಿಸಿದರು .