ಬೆಳ್ತಂಗಡಿ: ಅನುಭವ ನಿಷ್ಠ ಬರಹಗಳು ಸೃಜನ ಶೀಲ ಸ್ವರೂಪವನ್ನು ಪಡೆಯುತ್ತವೆ. ಕಾವ್ಯ ಎಂದರೆ ಅದು ಭಾವನೆಗಳ ಧ್ವನಿ ಹಾಗೂ ನಾನಾ ಸೂಚ್ಯ ಅರ್ಥಗಳನ್ನು ಹೊಂದಿರುತ್ತದೆ. ಗದ್ಯ ಒಂದೇ ಅರ್ಥವನ್ನು ಹೊಂದಿದ್ದು, ಅದು ವಾಚ್ಯವಾಗಿರುತ್ತದೆ ಎಂದು ಹಿರಿಯ ಕವಿ, ಸಾಹಿತಿ ಡಾ.ವಸಂತಕುಮಾರ್ ಪೆರ್ಲ ಹೇಳಿದರು.
ಅವರು ಉಜಿರೆಯ ಶ್ರೀ ಧ.ಮಂ.ಕಾಲೇಜಿನ ಸಮ್ಯಗ್ದರ್ಶನ ಸಭಾಭವನದಲ್ಲಿ ಕವಯತ್ರಿ, ಪುತ್ತೂರಿನ ಉಪ ತಹಸೀಲ್ದಾರ್ ಸುಲೋಚನಾ ಪಿ.ಕೆ. ಅವರ ‘ಕೊಡುವ ಮೊದಲು’ ಕವನ ಸಂಕಲನ ಬಿಡುಗಡೆಗೊಳಿಸಿ ಮಾತನಾಡಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಉಜಿರೆ ಶ್ರೀ ಧ.ಮಂ. ಮಹಾವಿದ್ಯಾಲಯದ ಕನ್ನಡ ಸಂಘದ ವತಿಯಿಂದ ಕಾರ್ಯಕ್ರಮ ನಡೆಯಿತು. ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಬೆಳವಣಿಗೆ,ವ್ಯಕ್ತಿತ್ವ ವಿಕಾಸ, ಜ್ಞಾನಕೋಶ ಭಾವಕೋಶಗಳನ್ನು ವಿಸ್ತರಿಸುತ್ತದೆ.
ಸಮಾಜಕ್ಕೆ ಹೆಚ್ಚಿನ ಕೊಡುಗೆ ನೀಡಬಲ್ಲವರನ್ನಾಗಿ ರೂಪಿಸುತ್ತದೆ. ಕಲಿಕೆಯ ಜತೆ ಸಾಧನೆ ಮಾಡುವ ಗುರಿ ಹೊಂದಿದವರು ಸಮಾಜಕ್ಕೆ ಕೊಡುಗೆ ನೀಡಲು ಸಾಧ್ಯ ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕ ರಾಜೇಶ್ ಜಿ. ಮಾತನಾಡಿ,ಬರಹಗಾರರಿಗೆ ಬೆಂಬಲ ಪ್ರೋತ್ಸಾಹ ಬೇಕು, ಇದು ಇನ್ನಷ್ಟು ಉತ್ತಮ ಕೃತಿಗಳು ಮೂಡಿಬರಲು ಪ್ರೇರಣೆಯಾಗುತ್ತದೆ ಎಂದರು.
ಸುಲೋಚನಾ ಪಿಕೆ ಮಾತನಾಡಿ ಓದುವುದು ಮಾತ್ರ ಜ್ಞಾನವಲ್ಲ, ಅನುಭವಗಳನ್ನು ಅರಗಿಸಿಕೊಳ್ಳುವುದು ನಿಜವಾದ ಜ್ಞಾನವನ್ನು ನೀಡುತ್ತದೆ ಎಂದರು.
ಕಾಲೇಜಿನ ಪ್ರಿನ್ಸಿಪಾಲ್ ಡಾ.ಉದಯಚಂದ್ರ ಪಿ.ಎನ್. ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಸಾಪ ಜಿಲ್ಲಾ ಕಾರ್ಯಾಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ಅಧ್ಯಕ್ಷತೆ ವಹಿಸಿದ್ದರು.
ಕನ್ನಡ ವಿಭಾಗದ ಮುಖ್ಯಸ್ಥ ಡಾ. ಬಿ.ಪಿ. ಸಂಪತ್ ಕುಮಾರ್ ಸ್ವಾಗತಿಸಿದರು. ಮಹೇಶ್ ಆರ್ ಕಾರ್ಯಕ್ರಮ ನಿರೂಪಿಸಿದರು. ದಶಮಿ ವಂದಿಸಿದರು.
ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.