ಬೆಳ್ತಂಗಡಿ: ಹಸಿಮೀನು ಮಾರಿಕೊಂಡು ಜೀವನ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪದ ಶಿಬಾಜೆ ಗ್ರಾಮದ ಪೆರ್ಲ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ವ್ಯಕ್ತಿ ಬಾವಿಕಟ್ಟೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೆರ್ಲ ನಿವಾಸಿ ನೋಣಯ್ಯ ಗೌಡ( 55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ.
ಅವರು ಅಂಗವೈಫಲ್ಯ ಹೊಂದಿದ್ದ ವ್ಯಕ್ತಿಯಾಗಿದ್ದರು ಎನ್ನಲಾಗಿದೆ. ಕಳೆದ ಹಲವು ಸಮಯದಿಂದ ಶಿಬಾಜೆಯ ಪರಿಸರದಲ್ಲಿ ಹಸಿಮೀನಿನ ವ್ಯಾಪಾರ ಮಾಡಿಕೊಂಡಿದ್ದು ಅದರಲ್ಲಿಯೇ ಅವರು ಜೀವನ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಮೃತರು ಪತ್ನಿ ಮಂಜುಳಾ, ಪುತ್ರರಾದ ಅಭಿಷೇಕ್, ನಿರಂಜನ್ ಅವರನ್ನು ಅಗಲಿದ್ದಾರೆ. ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಹಾಯವಾಣಿಗೆ ಕರೆ ಮಾಡಿ:
ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು