ಬೆಳ್ತಂಗಡಿ: ಉಜಿರೆಯ ಕಾಶಿಬೆಟ್ಟಿನ ಅರಳಿ ರಸ್ತೆಯಲ್ಲಿರುವ ರೋಟರಿ ಸೇವಾಭವನದಲ್ಲಿ ರೋಟರಿ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ಖ್ಯಾತ ಕಲಾವಿದರಾದ ಗುರುವಾಯನಕೆರೆಯ ಸರ್ಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ.ವಿಟ್ಲರವರನ್ನುಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.ಇದೇ ಸಂದರ್ಭದಲ್ಲಿ ರೋಟರಿ ಕ್ಲಬ್ಬಿನಲ್ಲಿರುವ ಎಲ್ಲಾ ಶಿಕ್ಷಕರನ್ನು ಗೌರವಿಸಲಾಯಿತು.
ವಿಕೆವಿಟ್ಲರವರು ಮಾತನಾಡಿ ಚಿತ್ರಕಲೆ ಮಕ್ಕಳ ಏಕಾಗ್ರತೆಯನ್ನು ಹೆಚ್ಚಿಸಿ ಮನಸ್ಸನ್ನು ಅರಳಿಸುತ್ತದೆ. ಮಕ್ಕಳ ಕಲಾಪ್ರತಿಭೆಯನ್ನು ಎಳವೆಯಲ್ಲೇ ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಅಭಿಪ್ರಾಯಪಟ್ಟರು.
ಎಸ್ ಡಿ ಎಂ ಇಂಗ್ಲಿಷ್ ಮಾಧ್ಯಮ ಶಾಲೆಯ ಇಂಟರಾಕ್ಟ್ ಕ್ಲಬ್ಬಿನ ಅಧ್ಯಕ್ಷ ಆ್ಯನೆಟ್ ಪ್ರಥಮ್ ಆದರ್ಶ ಶಿಕ್ಷಕ ಹೇಗಿರಬೇಕು ಎಂಬ ವಿಷಯದ ಬಗ್ಗೆ ತನ್ನ ಅನಿಸಿಕೆಯನ್ನು ವ್ಯಕ್ತಪಡಿಸಿದರು.
ಸನ್ಮಾನಿತ ಶಿಕ್ಷಕರ ಪರವಾಗಿ ಆ್ಯನ್ ದೀಪ್ತಿ ಮಾತನಾಡಿ ಪ್ರಸ್ತುತ ಶಿಕ್ಷಕರಿಗಿರುವ ಸವಾಲುಗಳ ಬಗ್ಗೆ ವಿವರಿಸಿದರು.
ಆ್ಯನ್ ಶ್ರುತಿ ಕಾಂತಾಜೆ ಪ್ರಾರ್ಥನೆಯನ್ನು ಮಾಡಿದರು. ರೋಟರಿಕ್ಲಬ್ ಅಧ್ಯಕ್ಷೆ ರೊ. ಮನೋರಮಾ ಭಟ್ ಸ್ವಾಗತಿಸಿ ಆ್ಯನ್ಸ್ ಕ್ಲಬ್ ಅಧ್ಯಕ್ಷೆ ಆ್ಯನ್ ಸುಜಾತ ಅಣ್ಣಿ ಪೂಜಾರಿ ವಂದಿಸಿದರು. ವಿಧಾನ ಪರಿಷತ್ ಸದಸ್ಯರು ಬೆಳ್ತಂಗಡಿ ರೋಟರಿ ಕ್ಲಬ್ ಸದಸ್ಯರೂ ಆದ ರೊ.ಪ್ರತಾಪಸಿಂಹ ನಾಯಕರೂ ಸೇರಿದಂತೆ ಕ್ಲಬ್ಬಿನ ಹೆಚ್ಚಿನ ಸದಸ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.