ಮಂಗಳೂರು

ಬೆಳ್ತಂಗಡಿ: ರೋಟರಿ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ

ಬೆಳ್ತಂಗಡಿ: ಉಜಿರೆಯ ಕಾಶಿಬೆಟ್ಟಿನ ಅರಳಿ ರಸ್ತೆಯಲ್ಲಿರುವ ರೋಟರಿ ಸೇವಾಭವನದಲ್ಲಿ ರೋಟರಿ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಖ್ಯಾತ ಕಲಾವಿದರಾದ ಗುರುವಾಯನಕೆರೆಯ ಸರ್ಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ.ವಿಟ್ಲರವರನ್ನುಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.ಇದೇ ಸಂದರ್ಭದಲ್ಲಿ ರೋಟರಿ ಕ್ಲಬ್ಬಿನಲ್ಲಿರುವ ಎಲ್ಲಾ ಶಿಕ್ಷಕರನ್ನು ಗೌರವಿಸಲಾಯಿತು.

ವಿಕೆವಿಟ್ಲರವರು ಮಾತನಾಡಿ ಚಿತ್ರಕಲೆ ಮಕ್ಕಳ ಏಕಾಗ್ರತೆಯನ್ನು ಹೆಚ್ಚಿಸಿ ಮನಸ್ಸನ್ನು ಅರಳಿಸುತ್ತದೆ. ಮಕ್ಕಳ ಕಲಾಪ್ರತಿಭೆಯನ್ನು ಎಳವೆಯಲ್ಲೇ ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಅಭಿಪ್ರಾಯಪಟ್ಟರು.

ಎಸ್ ಡಿ ಎಂ ಇಂಗ್ಲಿಷ್ ಮಾಧ್ಯಮ ಶಾಲೆಯ ಇಂಟರಾಕ್ಟ್ ಕ್ಲಬ್ಬಿನ ಅಧ್ಯಕ್ಷ ಆ್ಯನೆಟ್ ಪ್ರಥಮ್ ಆದರ್ಶ ಶಿಕ್ಷಕ ಹೇಗಿರಬೇಕು ಎಂಬ ವಿಷಯದ ಬಗ್ಗೆ ತನ್ನ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಸನ್ಮಾನಿತ ಶಿಕ್ಷಕರ ಪರವಾಗಿ ಆ್ಯನ್ ದೀಪ್ತಿ ಮಾತನಾಡಿ ಪ್ರಸ್ತುತ ಶಿಕ್ಷಕರಿಗಿರುವ ಸವಾಲುಗಳ ಬಗ್ಗೆ ವಿವರಿಸಿದರು.

ಆ್ಯನ್ ಶ್ರುತಿ ಕಾಂತಾಜೆ ಪ್ರಾರ್ಥನೆಯನ್ನು ಮಾಡಿದರು. ರೋಟರಿಕ್ಲಬ್ ಅಧ್ಯಕ್ಷೆ ರೊ. ಮನೋರಮಾ ಭಟ್ ಸ್ವಾಗತಿಸಿ ಆ್ಯನ್ಸ್ ಕ್ಲಬ್ ಅಧ್ಯಕ್ಷೆ ಆ್ಯನ್ ಸುಜಾತ ಅಣ್ಣಿ ಪೂಜಾರಿ ವಂದಿಸಿದರು. ವಿಧಾನ ಪರಿಷತ್ ಸದಸ್ಯರು ಬೆಳ್ತಂಗಡಿ ರೋಟರಿ ಕ್ಲಬ್ ಸದಸ್ಯರೂ ಆದ ರೊ.ಪ್ರತಾಪಸಿಂಹ ನಾಯಕರೂ ಸೇರಿದಂತೆ ಕ್ಲಬ್ಬಿನ ಹೆಚ್ಚಿನ ಸದಸ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.

Ashika S

Recent Posts

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

8 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

27 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

32 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

41 mins ago

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

1 hour ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

1 hour ago