News Karnataka Kannada
Thursday, May 02 2024
ಮಂಗಳೂರು

ಬೆಳ್ತಂಗಡಿ ರೋಟರಿ ಕ್ಲಬ್‌ಗೆ ಡಿ. 15 ರಂದು ಎನ್. ಪ್ರಕಾಶ್ ಕಾರಂತ್ ಅಧಿಕೃತ ಭೇಟಿ

Belthangady Rotary Club On the 15th, n. Prakash Karanth's official visit
Photo Credit : News Kannada

ಬೆಳ್ತಂಗಡಿ: ರೋಟರಿ ಜಿಲ್ಲಾ ಗವರ್ನರ್ ತಮ್ಮ ವ್ಯಾಪ್ತಿಯ ಎಲ್ಲಾ ರೋಟರಿ ಕ್ಲಬ್‌ಗಳಿಗೆ ಅಧಿಕೃತ ಭೇಟಿ ಮಾಡಿ ಅಲ್ಲಿಯ ಚಟುವಟಿಕೆಗಳನ್ನು ವೀಕ್ಷಿಸುವುದು ವಾಡಿಕೆ. ಅದರಂತೆ ಈ ವರ್ಷ ಜಿಲ್ಲಾ ಗವರ್ನರ್ ಮೇಜರ್ ಡೋನರ್ ಎನ್ ಪ್ರಕಾಶ್ ಕಾರಂತ್ ಅವರು ಬೆಳ್ತಂಗಡಿ ರೋಟರಿ ಕ್ಲಬ್‌ಗೆ ಡಿ. 15 ರಂದು ಅಧಿಕೃತ ಭೇಟಿ ನೀಡಲಿದ್ದಾರೆ.

ಅಂದು ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಕ್ಲಬ್ ಅಧ್ಯಕ್ಷೆ ಮನೋರಮಾ ರಾವ್ ಹೇಳಿದರು. ಬೆಳ್ತಂಗಡಿ ಪ್ರೆಸ್‌ಕ್ಲಬ್ ನಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

51 ವರ್ಷಗಳ ಇತಿಹಾಸವಿರುವ ರೋಟರಿ ಕ್ಲಬ್ ಬೆಳ್ತಂಗಡಿ ನಾನಾ ಕಾರ್ಯಕ್ರಮಗಳ ಮೂಲಕ ತನ್ನನ್ನು ಗುರುತಿಸಿಕೊಂಡಿದೆ. ದ. ಕನ್ನಡ, ಕೊಡಗು, ಮೈಸೂರು ಹಾಗೂ ಚಾಮರಾಜನಗರಗಳನ್ನೊಳಗೊಂಡ ರೋಟರಿ ಜಿಲ್ಲೆ 3181ರ 2022-23ನೇ ಸಾಲಿನ ಜಿಲ್ಲಾ ಗವರ್ನರ್ ನಮ್ಮ ಜಿಲ್ಲೆಯವರೇ ಆದ ರೊ. ಎನ್. ಪ್ರಕಾಶ್ ಕಾರಂತರು, ಇವರ ಮಾರ್ಗದರ್ಶನದಲ್ಲಿ ರೋಟರಿ ಜಿಲ್ಲೆಯಾದ್ಯಂತ ಇರುವ ಎಲ್ಲಾ ಕ್ಲಬ್‌ಗಳು ಈ ವರ್ಷ ಜಲಸಿರಿ, ವನಸಿರಿ, ಆರೋಗ್ಯಸಿರಿ ಹಾಗೂ ವಿದ್ಯಾಸಿರಿ ಯೋಜನೆಯಡಿಯಲ್ಲಿ ವಿವಿಧ ಜನೋಪಯೋಗಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡಿವೆ. ಆ ದಿನ ಅವರು ಬೆಳಿಗ್ಗೆ 9-30 ಗಂಟೆಗೆ ರೋಟರಿ ಸೇವಾಭವನದಲ್ಲಿ ಕ್ಲಬ್‌ನ ನಿರ್ದೇಶಕ ಮಂಡಳಿ ಹಾಗೂ ಸದಸ್ಯರನ್ನೊಳಗೊಂಡ ಕ್ಲಬ್ ಅಸೆಂಬ್ಲಿಯನ್ನು ನಡೆಸಲಿದ್ದಾರೆ.

ಕ್ಲಬ್ ವಿದ್ಯಾಸಿರಿ ಯೋಜನೆಯಡಿಯಲ್ಲಿ ಸೆಲ್ಕೋ ಹಾಗೂ ದಾನಿಗಳ ನೆರವಿನೊಂದಿಗೆ ಗುರುವಾಯನಕೆರೆ ಸರಕಾರಿ ಹಸ್ತಾಂತರಿಸಿದ್ದಾರೆ. ಪ್ರಾಥಮಿಕ ಶಾಲೆಗೆ ನೀಡಲಿರುವ ಸ್ಮಾರ್ಟ್ ಕ್ಲಾಸ್‌ನ್ನು ಶಾಲೆಗೆ ಹಸ್ತಾಂತರಿಸಲಿದ್ದಾರೆ.

ಅರಣ್ಯ ಇಲಾಖೆ ಹಾಗೂ ಕಾಲೇಜಿನ ರೆಡ್ ಕ್ರಾಸ್ ವಿಭಾಗದೊಂದಿಗೆ ಜಂಟಿಯಾಗಿ ಬೆಳ್ತಂಗಡಿ ಜೂನಿಯರ್ ಕಾಲೇಜಿನ ಆವರಣದಲ್ಲಿ ರೋಟರಿ ಕ್ಲಬ್ ವನಸಿರಿ ಯೋಜನೆಯಡಿಯಲ್ಲಿ ನಿರ್ಮಾಣ ಮಾಡಲಿರುವ ವೃಕ್ಷವಾಟಿಕಾ ಆರ್ಬೋರೇಟಂ ಕೆಲಸಗಳಿಗೆ ಚಾಲನೆ ನೀಡಲಿದ್ದಾರೆ.

ಆರೋಗ್ಯ ಸಿರಿ ಯೋಜನೆಯಡಿಯಲ್ಲಿ 15 ಆಯ್ದ ಅರ್ಹ ಫಲಾನುಭವಿಗಳಿಗೆ ರೋಟರಿ ಸೇವಾಭವನದಲ್ಲಿ ಗಾಲಿ ಕುರ್ಚಿಗಳನ್ನು ವಿತರಿಸಲಿದ್ದಾರೆ.

ಅದೇ ದಿನ ಅಪರಾಹ್ನ 12-15 ಗಂಟೆಗೆ ಕಾಶಿಬೆಟ್ಟು ಅರಳಿಯ ರೋಟರಿ ಸಭಾ ಭವನದಲ್ಲಿ ಬೆಳ್ತಂಗಡಿ ಪತ್ರಕರ್ತರ ಸಂಘದ ಸದಸ್ಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಸಂಜೆ 7ಕ್ಕೆ ಉಜಿರೆಯ ಓಷ್ಯನ್ ಪರ್ಲ್ ಹೋಟೇಲ್‌ ಸಭಾಂಗಣದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ವಲಯ IV ರ ಸಹಾಯಕ ಗವರ್ನರ್ ರೋ. ಮೇಜರ್ ಡೋನರ್ ಮೇಜರ್ ಜನರಲ್ ಎಂ.ವಿ.ಭಟ್ (ನಿವೃತ್ತ) ಹಾಗೂ ವಲಯ ಸೇನಾನಿ ರೊ. ಶರತ್ ಕೃಷ್ಣ ಪಡ್ಡೆಟ್ನಾಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ರೋಟರಿ ಕ್ಲಬ್ ಕಾರ್ಯದರ್ಶಿ ರಕ್ಷಾ ರಾಗ್ನೇಶ್, ನಿಯೋಜಿತ ಅಧ್ಯಕ್ಷ ಮಚ್ಚಿಮಲೆ ಅನಂತ ಭಟ್, ಕಾರ್ಯದರ್ಶಿ ವಿದ್ಯಾ ಕುಮಾರ್ ಕಾಂಚೋಡು, ಮಾಜಿ ಅಧ್ಯಕ್ಷ ಬಿ.ಕೆ ಧನಂಜಯ ರಾವ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು