Categories: ಮಂಗಳೂರು

ಬೆಳ್ತಂಗಡಿ: 3.50 ಕೋಟಿ ಅನುದಾನದಲ್ಲಿ ರಸ್ತೆಗಳಿಗೆ ಶಿಲಾನ್ಯಾಸ

ಬೆಳ್ತಂಗಡಿ: ಕ್ಷೇತ್ರದಲ್ಲಿ ಈವರೆಗೆ ರೂ. ೩೦೦೦ ಕೋಟಿಗೂ ಮಿಕ್ಕಿ ಅನುದಾನದಲ್ಲಿ ಗ್ರಾಮಗ್ರಾಮದಲ್ಲಿ ಅಭಿವೃದ್ಧಿ ಕಾರ್ಯ ನಡೆದಿದೆ. ಈ ಮೂಲಕ ಗ್ರಾಮೀಣ ಭಾಗದ ರಸ್ತೆಯು ಅಭೂತಪೂರ್ವ ಸುವರ್ಣಯುಗ ಕಂಡಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಅಂಡಿಂಜೆ ಗ್ರಾ.ಪಂ. ವ್ಯಾಪ್ತಿಯ ಅಂಡಿಂಜೆ-ನೆಲ್ಲಿಂಗೇರಿ-ಮೂಡುಕೋಡಿ ಸಂಪರ್ಕ ರಸ್ತೆಗೆ ರೂ. ೧ ಕೋಟಿ, ಕೊಕ್ರಾಡಿ ಗ್ರಾಮದ ಬೊಳ್ಳಕುಮೇರು-ಪಿಲ್ಯ ಸಂಪರ್ಕ ರಸ್ತೆಗೆ ರೂ. ೧ ಕೋಟಿ ಹಾಗೂ ಕೊಕ್ರಾಡಿ ಗ್ರಾಮದ ಅತ್ರಿಜಾಲು ಮತ್ತು ಏಳಂಬ ರಸ್ತೆಗೆ ತಲಾ ರೂ. ೭೫ ಲಕ್ಷ ರೂ. ವೆಚ್ಚದಲ್ಲಿ ನಡೆಯಲಿರುವ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಸೋಮವಾರ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ರಾಜ್ಯಹೆದ್ದಾರಿಗೆ ರೂ. ೨೮ ಕೋಟಿ ಹದಗೆಟ್ಟಿರುವ ಗುರುವಾಯನಕೆರೆ-ಅಳದಂಗಡಿ ರಾಜ್ಯ ಹೆದ್ದಾರಿಯು ೨೮ ಕೋಟಿ ವೆಚ್ಚದಲ್ಲಿ ಅಗಲೀಕರಣದ ಕಾಮಗಾರಿ ಪ್ರಗತಿಯಲ್ಲಿದೆ. ಸುಲ್ಕೇರಿಯಿಂದ ನಾರಾವಿವರೆಗೆ ಮುಂದುವರಿದ ಕಾಮಗಾರಿಗೆ ರೂ.೨೨ ಕೋಟಿಯ ಕ್ರಿಯಾಯೋಜನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ. ಮುಂದಿನ ಬಾರಿ ಮತ್ತೆ ಅವಕಾಶ ದೊರೆತರೆ ತಾಲೂಕಿನಲ್ಲಿ ಎಲ್ಲಾ ಮಣ್ಣಿನ ರಸ್ತೆಗಳಿಂದ ಮುಕ್ತಿಗೊಳಿಸುತ್ತೇನೆ ಎಂದರು.

ಅಂಡಿಂಜೆ ಗ್ರಾ.ಪಂ. ಅಧ್ಯಕ್ಷೆ ಜಯಂತಿ, ಉಪಾಧ್ಯಕ್ಷೆ ಶ್ವೇತಾ ಪರಮೇಶ್ವರ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಗ್ರಾ.ಪಂ. ಸದಸ್ಯರಾದ ಹರೀಶ್ ಹೆಗ್ಡೆ ಸಾವ್ಯ, ರಂಜಿತ್ ಪಾರಿಜಾತ, ಜಗದೀಶ್ ಹೆಗ್ಡೆ, ಶೋಭಾ ನಾಯ್ಕ, ಬಿಜೆಪಿ ಮಂಡಲ ಹಿಂದುಳಿದ ವರ್ಗಗಳ ಕಾರ್ಯದರ್ಶಿ ದಯಾನಂದ ಕುಲಾಲ್, ವೇಣೂರು ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕ ಸಂತೋಷ್ ಜೈನ್ ಪಕ್ಕಳ, ಆಶಾ, ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮೋಹನ್ ಅಂಡಿಂಜೆ, ಪ್ರಮುಖರಾದ ಪ್ರಣೀತ್, ಯಶೋಧರ ಕಜೆ, ಉಮಾವತಿ ಮರೋಡಿ, ಉಮೇಶ್ ಗೌಡ, ನಾರಾಯಣ ಪೂಜಾರಿ ಸುಲ್ಕೇರಿ, ಅಂಡಿಂಜೆ ಗ್ರಾ.ಪಂ. ಮಾಜಿ ಅಧ್ಯಕ್ಷೆ ಶಾಲಿನಿ, ಡಾ| ವಿಷ್ಣುಕುಮಾರ್ ಹೆಗ್ಡೆ, ಪಿಡಿಒ ರಾಘವೇಂದ್ರ ಪಾಟೀಲ್, ಎಂಜಿನಿಯರ್ ವರ್ಷ ಪ್ರಭು ಮತ್ತಿತರರು ಇದ್ದರು.

Ashika S

Recent Posts

ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಕೆ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌…

3 mins ago

ಬೀದರ್‌: ಬಿಸಿ ದೋಸೆಯಂತೆ ಮಾರಾಟವಾಗುತ್ತಿದೆ ಎಸಿ, ಕೂಲರ್‌

ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್‌ ಕಂಡಿಷನರ್‌ (ಎಸಿ), ಏರ್‌ ಕೂಲರ್‌ಗಳ…

17 mins ago

ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆ: ಬಿ.ಎಸ್.ಯಡಿಯೂರಪ್ಪ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…

34 mins ago

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

53 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

55 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

1 hour ago