ಬೆಳ್ತಂಗಡಿ: ಉಜಿರೆಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡದ ಕಾಮಗಾರಿ ಪೂರ್ಣಗೊಂಡಿರುವ ಹಿನ್ನೆಲೆ ಅ.1 ರಂದು ಉದ್ಘಾಟನಾ ಪೂರ್ವ ವಾಸ್ತು ಪೂಜೆ ಹಾಗೂ ಗಣಹೋಮ ಪೂಜಾ ವಿಧಿವಿಧಾನ ನೆರವೇರಿತು.
ಉಜಿರೆಯ ಚಾರ್ಮಾಡಿ ರಸ್ತೆಯಲ್ಲಿ ಮುಖ್ಯಪೇಟೆಯಿಂದ ಸುಮಾರು 800 ಮೀ. ದೂರದಲ್ಲಿ ಇಲಾಖೆಯ ಒಂದು ಎಕರೆ ಜಾಗವಿದ್ದು ಇದರಲ್ಲಿ ಎರಡು ಅಂತಸ್ತಿನ ಸುಸಜ್ಜಿತ ಕಟ್ಟಡವನ್ನು ಸುಮಾರು 3.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇಲ್ಲಿ ಪಿಯುಸಿಯಿಂದ ಸ್ನಾತಕೋತ್ತರ ಪದವಿ ತನಕದ 100 ವಿದ್ಯಾರ್ಥಿಗಳಿಗೆ ಆಶ್ರಯ ನೀಡುವ ವ್ಯವಸ್ಥೆ ಇದೆ. ಇದರಲ್ಲಿ ಶೇ.75 ಎಸ್.ಟಿ. ಹಾಗೂ ಶೇ.25 ಸೀಟುಗಳು ಒಬಿಸಿ ಹಾಗೂ ಇತರ ವಿದ್ಯಾರ್ಥಿಗಳಿಗೆ ದೊರಕಲಿವೆ ಎಂದು ತಿಳಿಸಿದರು.
ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಪರಿಶಿಷ್ಟ ಪಂಗಡಗಳ ಯೋಜನಾ ಜಿಲ್ಲಾ ಸಮನ್ವಯಾಧಿಕಾರಿ ರಶ್ಮಿ ಎಸ್.ಆರ್., ತಹಶೀಲ್ದಾರ್ ಪೃಥ್ವಿ ಸಾನಿಕಮ್, ತಾ.ಪಂ. ಇಒ ಕುಸುಮಾಧರ್ ಬಿ., ಜಿ.ಪಂ. ಮಾಜಿ ಸದಸ್ಯರಾದ ಕೊರಗಪ್ಪ ನಾಯ್ಕ್, ಸಿ.ಕೆ.ಚಂದ್ರಕಲಾ, ಉಜಿರೆ ಅಧ್ಯಕ್ಷೆ ಪುಷ್ಪಾವತಿ ಆರ್.ಶೆಟ್ಟಿ, ಉಪಾಧ್ಯಕ್ಷ ರವಿ ಬರಮೇಲು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿ ಜೋಸೆಫ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ್ ಸಿ.ಎಚ್., ಸಿಡಿಪಿಒ ಪ್ರಿಯಾ ಆಗ್ನೆಸ್, ಉಜಿರೆ ಗ್ರಾ.ಪಂ. ಸದಸ್ಯರಾದ ಗುರುಪ್ರಸಾದ್ ಕೋಟ್ಯಾನ್, ಉಜಿರೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ವಸತಿ ನಿಲಯ ಮೇಲ್ವಿಚಾರಕ ಕೃಷ್ಣಪ್ಪ, ಭೂನಿಯಮ ಮಂಡಳಿ ಸದಸ್ಯ ರಾಘವ ಕಲ್ಮಂಜ, ಮಾಜಿ ತಾ.ಪಂ. ಸದಸ್ಯೆ ವಿಮಲಾ ಉಪಸ್ಥಿತರಿದ್ದರು.