News Karnataka Kannada
Monday, April 29 2024
ಮಂಗಳೂರು

ಬೆಳ್ತಂಗಡಿ: ಸ್ಯಾಟಲೈಟ್ ಕರೆ ಸದ್ದು ಮಾಡಿದ ಹಿನ್ನಲೆ ಭದ್ರತಾ ದಳದಿಂದ ತನಿಖೆ

Belthangady: Security forces probe into satellite call
Photo Credit : Wikimedia

ಬೆಳ್ತಂಗಡಿ: ಕುಕ್ಕರ್ ಸ್ಫೋಟದ ಮೊದಲು ಉಪಗ್ರಹ ಆಧಾರಿತ ದೂರವಾಣಿ ಕರೆ ವಿನಿಮಯ ಆಗಿದೆ ಎಂಬ ಸಂಶಯದ ಹಿನ್ನಲೆಯಲ್ಲಿ ಆಂತರಿಕ ಭದ್ರತಾ ದಳದವರು ಬೆಳ್ತಂಗಡಿ ಸುತ್ತಮುತ್ತಲಿನ ರಕ್ಷಿತಾರಣ್ಯದಲ್ಲಿ ತನಿಖೆ ನಡೆಸಿದ್ದಾರೆ.

ಕೆಲದಿನಗಳ ಹಿಂದೆ ಮಂಗಳೂರು ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ನಡೆದ ಹಿಂದಿನ ದಿನ ದಕ್ಷಿಣ ಕನ್ನಡ ಜಿಲ್ಲೆಯ ಎರಡು ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಸದ್ದು ಮಾಡಿರುವ ಬಗ್ಗೆ ಬೆಳಕಿಗೆ ಬಂದಿದೆ. ಈ ಬಗ್ಗೆ ಆಂತರಿಕ ಭದ್ರತಾ ದಳದಿಂದ ತನಿಖೆ ನಡೆದಿದೆ.

ನ.18 ರಂದು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಬೆಂದ್ರಾಳ ಅರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಕರೆ .

ಅದಲ್ಲದೆ ಬಂಟ್ವಾಳ ತಾಲೂಕಿನ ಪ್ರದೇಶದಲ್ಲಿ ಕೂಡ ಸ್ಯಾಟಲೈಟ್ ಫೋನ್ ಸದ್ದು ಮಾಡಿದೆ ಎನ್ನಲಾಗಿದೆ. ಮಂಗಳೂರು ಆಂತರಿಕ ಭದ್ರತಾ ದಳದ ಅಧಿಕಾರಿಗಳು ಶುಕ್ರವಾರ ತೋಟತ್ತಾಡಿ ಪರಿಸರದಲ್ಲಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ತೋಟತ್ತಾಡಿ, ಬೆಂದ್ರಾಳ ಪ್ರದೇಶದಲ್ಲಿ ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ವಲಯವಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು