ಬೆಳ್ತಂಗಡಿ: ಮೆದುಳಿನ ರಕ್ತಸ್ರಾವದಿಂದ ಗಂಭೀರ ಸ್ಥಿತಿಯಲ್ಲಿದ್ದ ಬಹುಜನ ಚಳುವಳಿಯ ಹಿರಿಯ ನಾಯಕ, ಅಂಬೇಡ್ಕರ್ ವಾದಿ ಪಿ. ಡೀಕಯ್ಯ(63) ನವರು ಮಣಿಪಾಲ ಕೆಎಂಸಿ ಆಸ್ಪತ್ರೆ ಯಲ್ಲಿ ನಿಧನರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುಜನ ಚಳುವಳಿಯನ್ನು ಕಟ್ಟಿ ಬೆಳೆಸುವುದರಲ್ಲಿ ಡೀಕಯ್ಯ ಅವರ ಪಾತ್ರ ಅತ್ಯಂತ ಹಿರಿದು. ಜಿಲ್ಲೆಯ ಗ್ರಾಮ ಗ್ರಾಮಗಳಲ್ಲಿ ಸಂಚರಿಸಿ ಅವರು ಚಳವಳಿಯನ್ನು ಕಟ್ಟಿದವರು. ಪಿ.ಡೀಕಯ್ಯನವರು, ದೇಶದ ಇತಿಹಾಸದ ಜೊತೆಗೆ ತುಳುನಾಡಿನ ಇತಿಹಾಸವನ್ನೂ ಅರೆದು ಕುಡಿದಿದ್ದರು. ತುಳುನಾಡಿನಲ್ಲಿ ತಮ್ಮದೇ ಶೈಲಿಯಲ್ಲಿ ಬಹುಜನ ಚಳವಳಿಯನ್ನು ಕಟ್ಟಿದವರು.
ಅವರು ಸಾಕಷ್ಟು ಯುವ ನಾಯಕರನ್ನು ಸೃಷ್ಟಿಸಿದ್ದರು. ಕಾನದ ಕಟದರ ಇತಿಹಾಸದ ಕುರಿತು ಅಧ್ಯಯನ ಮಾಡಿ ಪುಸ್ತಕ ಬರೆದಿದ್ದ, ಡೀಕಯ್ಯರು ಅಪ್ರತಿಮ ಬರಹಗಾರರು ಕೂಡ ಆಗಿದ್ದರು. ಅವರ ಬರಹಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿತ್ತು. ಮನುವಾದದ ಕಡು ವಿರೋಧಿಯಾಗಿದ್ದ ಡೀಕಯ್ಯರು, ಅಸ್ಪೃಶ್ಯತೆ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಅವರು ಬಿ.ಎಸ್.ಎನ್ ಎಲ್. ನ ಉದ್ಯೋಗಿಯಾಗಿ ನಿವೃತ್ತರಾಗಿದ್ದರು. ತುಳುನಾಡ ಮನ್ಸ ಸಮಾಜ ಸೇವಾ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಸಂಘಟನೆಯನ್ನು ಕಟ್ಟಿದ್ದರು.
ಅವರು ಪತ್ನಿ ಹಿರಿಯ ಸಾಹಿತಿ ಅತ್ರಾಡಿ ಅಮೃತಾಶೆಟ್ಟಿ, ಕುಟುಂಬ ವರ್ಗದವರು ಹಾಗೂ ಅಪಾರ ಬೆಂಬಲಿಗರನ್ನು ಅಗಲಿದ್ದಾರೆ.
ಸಾವಿನಲ್ಲೂ ಸಾರ್ಥಕತೆ;
ಮೆದುಳಿನ ರಕ್ತ ಸ್ರಾವದಿಂದ ಡೀಕಯ್ಯ ಅವರು ಮೃತಪಟ್ಟಿದ್ದು ಕುಟುಂಬಸ್ಥರು ಅವರ ಅಂಗಾಂಗಗಳನ್ನು ದಾನ ಮಾಡಿ ಹಲವರ ಬದುಕಿಗೆ ದಾರಿ ತೋರಿದ್ದಾರೆ. ಅವರ ಅಂಗಾಗಳ ದಾನದ ಪ್ರಕ್ರಿಯೆಗಳು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ನಡೆಯಿತು.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…