ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಮೈರಲ್ಕೆ ಶ್ರೀಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ಪ್ರತಿಷ್ಠಾ, ಅಷ್ಟಬಂಧ ಬ್ರಹ್ಮಕಲಶೋತ್ಸವ ರವಿವಾರದಿಂದ ಆರಂಭಗೊಂಡಿದ್ದು, ವಿವಿಧ ವಿಭಾಗಗಳ ಉದ್ಘಾಟನಾ ಕಾರ್ಯಕ್ರಮಗಳು ನಡೆದವು. ರೈತ ಬಂಧು ಆಹಾರೋದ್ಯಮದ ಮಾಲಕರಾದ ಶಿವಶಂಕರ್ ನಾಯಕ್ ಹಸಿರು ಹೊರೆ ಕಾಣಿಕೆಗೆ ಚಾಲನೆ ನೀಡಿದರು.
ಬ್ರಹ್ಮಕಲಶ ಸಮಿತಿ ಅಧ್ಯಕ್ಷ, ಶಾಸಕ ಹರೀಶ್ ಪೂಂಜ ಅವರಿಗೆ ಹಸಿರು ಹೊರೆ ಕಾಣಿಕೆ ಸಮಿತಿಯವರು ಫಲಪುಷ್ಪ ತಾಂಬೂಲ ನೀಡಿ ವಿವಿಧ ಕಡೆಗಳಿಂದ ತಂದ ಹಸಿರು ಹೊರೆ ಕಾಣಿಕೆಯನ್ನು ಹಸ್ತಾಂತರಿಸಿದರು.
ಉದ್ಯಮಿ ಶ್ರೀಕಾಂತ ಕಾಮತ್ ಕಚೇರಿ ಉದ್ಘಾಟಿಸಿದರೆ, ಇನ್ನೋರ್ವ ಉದ್ಯಮಿ ಬಾಲಕೃಷ್ಣ ಸಿ. ನಾಯಕ್ ಉಗ್ರಾಣದ ಚಟುವಟಿಕೆಗಳಿಗೆ ಚಾಲನೆ ನೀಡಿದರು.
ಬರೋಡದ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ, ದೆಹಲಿಯ ಉದ್ಯಮಿ ಪ್ರಭಾಕರ ಶೆಟ್ಟಿ, ಕಳಿಯ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು, ಒಡೀಲು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಪಡಂಗಡಿ ಗ್ರಾ.ಪಂ. ಅಧ್ಯಕ್ಷೆ ಮೀನಾಕ್ಷಿ, ಉಪಾಧ್ಯಕ್ಷ ಸಂತೋಷ್ ಕುಮಾರ್ ಜೈನ್, ಮಚ್ಚಿನ ಗ್ರಾ.ಪಂ. ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ, ಕಳಿಯ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜನಾರ್ದನ ಗೌಡ, ಕಿರಾತಮೂರ್ತಿ ದೇವಸ್ಥಾನ ಬ್ರಹಕಲಶ ಸಮಿತಿ ಕಾರ್ಯಾಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ, ಪ್ರ.ಕಾರ್ಯದರ್ಶಿ ಧರಣೇಂದ್ರ ಕೆ., ಕೋಶಾಧಿಕಾರಿ ಮನೋಹರ ಪಿ.ಸಿ., ಧರ್ಮೋತ್ಥಾನ ಟ್ರಸ್ಟ್ ಅಧ್ಯಕ್ಷ ವೃಷಭ ಆರಿಗ, ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಗೋಪಾಲ ಶೆಟ್ಟಿ ಕೋರ್ಯಾರು ಮತ್ತಿತ್ತರರು ಉಪಸ್ಥಿತರಿದ್ದರು.