News Karnataka Kannada
Friday, May 10 2024
ಮಂಗಳೂರು

ಬೆಳ್ತಂಗಡಿ: ಅಮೃತಮಹೋತ್ಸವ ಸಭಾಂಗಣದ ಬಳಿ ‘ಸಿರಿ’ ಸಂಸ್ಥೆಯ ಶಾಶ್ವತ ಮಾರಾಟ ಮಳಿಗೆ ಉದ್ಘಾಟನೆ

'Siri' permanent outlet inaugurated near Amrita Mahotsava Hall in Belthangady
Photo Credit : By Author

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತ ಮಹೋತ್ಸವ ಸಭಾಂಗಣದ ಬಳಿ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಾರಾಟ ಮಳಿಗೆ ಶನಿವಾರ ಉದ್ಘಾಟಿಸಲ್ಪಟ್ಟಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು, ರಾಜ್ಯಸಭೆಯ ಸದಸ್ಯರೂ ಆಗಿರುವ ಡಾ. ಡಿ ವೀರೇಂದ್ರ ಹೆಗ್ಗಡೆ ಅವರು ಮತ್ತು ಹೆಗ್ಗಡೆಯವರವ ಮೊಮ್ಮಗಳು ಮಾನ್ಯಾ ದೀಪ ಪ್ರಜ್ವಲಿಸಿ ಉದ್ಘಾಟನೆ ನೆರವೇರಿಸಿದರು.

ಸಿರಿ ಸಂಸ್ಥೆಯು ರಾಜ್ಯದಾದ್ಯಂತ ವ್ಯವಸ್ಥಿತ ಮಾರುಕಟ್ಟೆಯನ್ನು ಸ್ಥಾಪಿಸಿದೆ. ಸಿರಿಯು ಮಹಿಳೆಯರ ಸ್ವಾವಲಂಬಿ ಬದುಕಿಗಾಗಿ ಪ್ರಾರಂಭ ವಾಗಿದ್ದು ಮಹಿಳೆಯರೆ ಉತ್ಪನ್ನಗಳನ್ನು ತಯಾರಿಸುತ್ತಿದ್ದು ಈ ಉತ್ಪನ್ನಗಳನ್ಬು ಖರೀದಿಸಿ ಪ್ರೊತ್ಸಾಹ ನೀಡಿ. ಈಗಾಗಲೆ ರಾಜ್ಯಾದ್ಯಂತ ಮಳಿಗೆಗಳು ಸ್ಥಾಪನೆಗೊಂಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬರುವ ಭಕ್ತರ ಅನುಕೂಲಕ್ಕೆ ಕ್ಷೇತ್ರದಲ್ಲಿ ಶಾಶ್ವತ ನೂತನ ಮಳಿಗೆ ತೆರೆಯಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್ ಎಚ್ ಮಂಜುನಾಥ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್, ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕ ಕೆ. ಏನ್ ಜನಾರ್ಧನ್, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ ಶೆಟ್ಟಿ, ಸಿರಿ ಸಂಸ್ಥೆಯ ನಿರ್ದೇಶಕ ಪ್ರಸನ್ನ, ಮಾರುಕಟ್ಟೆ ವಿಭಾಗದ ಅಧಿಕಾರಿ ವಿನ್ಸೆಂಟ್ ಮೊದಲಾದವರು ಉಪಸ್ಥಿತರಿದ್ದರು.

ಸಿರಿ ಸಂಸ್ಥೆ ಈಗಾಗಲೇ ಮಂಗಳೂರಿನಲ್ಲಿ 2, ಧರ್ಮಸ್ಥಳ ದಲ್ಲಿ 2, ಹಾಸನದಲ್ಲಿ 1, ಬೆಂಗಳೂರು 1, ಧಾರವಾಡ 1 ಮತ್ತು ಉಡುಪಿ ಪರೀಕದಲ್ಲಿ 1 ಶಾಶ್ವತ ಮಾರಾಟ ಮಳಿಗೆ ಕಾರ್ಯಾಚರಿಸುತ್ತಿದ್ದು, ಧರ್ಮಸ್ಥಳದ ಮಳಿಗೆ 14 ನೇ ಮಳಿಗೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು