News Karnataka Kannada
Monday, April 29 2024
ಮಂಗಳೂರು

ಬೆಳ್ತಂಗಡಿ: ಹಾವು ಹಿಡಿಯುವ ವೇಳೆ ಕಡಿತ, ಸ್ನೇಕ್ ಅಶೋಕ ಆಸ್ಪತ್ರೆಗೆ ದಾಖಲು

Snake conservationist Ashok Layila
Photo Credit : News Kannada

ಬೆಳ್ತಂಗಡಿ: ವಿಷಪೂರಿತ ಹಾವುಗಳನ್ನು ಹಿಡಿದು ಖ್ಯಾತರಾದ ಹಾವುಗಳ ಸಂರಕ್ಷಕರಾದ ಸ್ನೇಕ ಅಶೋಕ್ ಲಾಯಿಲ ಇವರು ನಾಗರ ಹಾವು ಹಿಡಿಯುವ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಧರ್ಮಸ್ಥಳ ಗ್ರಾಮದಲ್ಲಿ ಇಂದು ಮನೆಯೊಂದರಲ್ಲಿ ನಾಗರ ಹಾವು ಇರುವುದಾಗಿ ಸ್ನೇಕ್ ಅಶೋಕ್ ಅವರಿಗೆ ಮಾಹಿತಿ ಬಂದಿತ್ತು ಇದರ ರಕ್ಷಣೆಗೆ ತಕ್ಷಣ ಹೊರಟ ಅವರು ನಾಗರ ಹಾವನ್ನು ಹಿಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿದೆ ಎನ್ನಲಾಗುತ್ತಿದೆ.

ತಕ್ಷಣ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು