ಬೆಳ್ತಂಗಡಿ: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ರಘುನಾಥರಾವ್ ಮಲಕಾಪೂರೆ ಅವರು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ,ವಿಶೇಷ ಸೇವೆ ಸಲ್ಲಿಸಿ , ಪ್ರಸಾದ ಸ್ವೀಕರಿಸಿದರು.
ಕ್ಷೇತ್ರದ ಪರವಾಗಿ ಪಾರ್ಶ್ವನಾಥ್ ಅವರು ಸಭಾಪತಿಯವರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ. ಪ್ರತಾಪಸಿಂಹ ನಾಯಕ್ ಜತೆಗಿದ್ದರು. ವಿಧಾನ ಪರಿಷತ್ ಸಭಾಪತಿ ರಘುನಾಥ ರಾವ್ ಮಲಕಾಪುರೆ ಅವರು ಸಪರಿವಾರ ಸಹಿತ ಶ್ರೀ ಕ್ಷೇತ್ರ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದು, ವಿಶೇಷ ಸೇವೆ ಸಲ್ಲಿಸಿ ,ಪ್ರಸಾದ ಸ್ವೀಕರಿಸಿದರು. ಕ್ಷೇತ್ರದ ಪರವಾಗಿ ಅವರನ್ನು ಗೌರವಿಸಲಾಯಿತು. ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಜತೆಗಿದ್ದರು .
ವಿಧಾನ ಪರಿಷತ್ ಸಭಾಪತಿ ರಘುನಾಥರಾವ್ ಮಲಕಾಪುರೆ ಅವರು ಕುಟುಂಬ ಸಮೇತರಾಗಿ ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿ ,ಶ್ರೀ ದೇವರ ದರ್ಶನ ಪಡೆದು,ವಿಶೇಷ ಪೂಜೆ ಸಲ್ಲಿಸಿ,ಪ್ರಸಾದ ಸ್ವೀಕರಿಸಿದರು. ಕ್ಷೇತ್ರದ ಪರವಾಗಿ ಅರ್ಚಕ ಸುಬ್ರಹ್ಮಣ್ಯ ತೊಡ್ತಿಲ್ಲಾಯರು ಅವರಿಗೆ ಶಾಲು ಹೊದಿಸಿ ಗೌರವಿಸಿದರು. ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಜತೆಗಿದ್ದರು.