Categories: ಮಂಗಳೂರು

ಬೆಳ್ತಂಗಡಿ: ಕ್ರೀಡಾಕೂಟಗಳು ಪ್ರತಿಭೆಗಳ ಅನಾವರಣದ ವೇದಿಕೆ

ಬೆಳ್ತಂಗಡಿ: ಗ್ರಾಮೀಣ ಕ್ರೀಡಾಕೂಟಗಳು ಹಳ್ಳಿಗಳಲ್ಲಿರುವ ವಿಶಿಷ್ಟ ಪ್ರತಿಭೆಗಳ ಅನಾವರಣದ ವೇದಿಕೆಯಾಗಿದೆ. ಅವರ ಭವಿಷ್ಯಕ್ಕೆ ಅಡಿಪಾಯ ನಿರ್ಮಿಸಲು ಸಹಕಾರಿ ಎಂದು ಶಾಸಕ ಹರೀಶ್‌ ಪೂಂಜ ಹೇಳಿದರು.

ಅವರು ನಾವೂರು ಗ್ರಾ.ಪಂ. ಸಹಕಾರದಲ್ಲಿ ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ತಾಲೂಕಿನ ಹುಣ್ಸೆಕಟ್ಟೆಯಲ್ಲಿ ಕ್ರೀಡಾಂಗಣ ನಿರ್ಮಾಣವಾಗಲಿದ್ದು ಇದು ಯುವ ಜನತೆಗೆ ವರದಾನವಾಗಲಿದೆ. ಈ ಸುಸಜ್ಜಿತ ಕ್ರೀಡಾಂಗಣ ಹೆಚ್ಚಿನ ಸೌಲಭ್ಯಗಳೊಂದಿಗೆ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲಿದೆ. ಕ್ರೀಡಾ ಸ್ಪೂರ್ತಿಯೊಂದಿಗೆ ಆಟೋಟಗಳಲ್ಲಿ ಪಾಲ್ಗೊಂಡು ಯಶಸ್ಸಿಗೆ ಪಾತ್ರರಾಗಬೇಕು ಎಂದು ಹೇಳಿದರು.

ಎಂ ಎಲ್ ಸಿ ಕೆ. ಪ್ರತಾಪಸಿಂಹ ನಾಯಕ್ ಮಾತನಾಡಿ ಶಾರೀರಿಕ ಹಾಗೂ ಮಾನಸಿಕ ಸ್ಫೂರ್ತಿಗೆ ಕ್ರೀಡೆಗಳು ಮೂಲ. ಗೆಲುವಿನ ಬಗ್ಗೆ ಯೋಚಿಸದೆ ಇದರಲ್ಲಿ ಪಾಲ್ಗೊಂಡು ಒಂದೊಮ್ಮೆ ಸೋಲು ಬಂದರು ಕಠಿಣ ಪರಿಶ್ರಮದ ಮೂಲಕ ಭವಿಷ್ಯದಲ್ಲಿ ಗೆಲುವಾಗಿ ಪರಿವರ್ತಿಸುವ ಮೂಲಕ ಇತರರಿಗೆ ಮಾದರಿಯಾಗಬೇಕು ಎಂದು ಹೇಳಿದರು.

ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ ಗೌಡ, ಬಂಗಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲಿಯಾನ್, ಬಿಇಒ ಎಚ್.ಎಸ್. ವಿರೂಪಾಕ್ಷಪ್ಪ, ವಿವಿಧ ಗ್ರಾಮ ಪಂಚಾಯಿತಿ ಅಧ್ಯಕ್ಷರು,ನವೋದಯ ಯುವಕ ಮಂಡಲದ ಅಧ್ಯಕ್ಷರಾದ ಹರೀಶ್ ನಾವೂರು ಉಪಸ್ಥಿತರಿದ್ದರು.

ಉಜಿರೆ ಗ್ರಾಪಂ. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಕಾರ್ಯಕ್ರಮ ನಿರೂಪಿಸಿದರು.ತಾಪಂ ಇಒ ಕುಸುಮಾಧರ ಸ್ವಾಗತಿಸಿದರು.ತಾಲೂಕು ಪಂಚಾಯಿತಿ ವತಿಯಿಂದ ನಡೆದ ಕಾರ್ಯಕ್ರಮಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳ್ತಂಗಡಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ನವೋದಯ ಯುವಕ ಮಂಡಲ ನಾವೂರು,ಗ್ರಾಪಂ ನಾವೂರು, ಸ.ಹಿ.ಪ್ರಾ. ಶಾಲೆ ನಾವೂರು ಸಹಭಾಗಿತ್ವ ನೀಡಿದವು.

ಈ ಕಾರ್ಯಕ್ರಮದಲ್ಲಿ ಕಬಡ್ಡಿ ಕ್ರೀಡಾಂಗಣ ಉದ್ಘಾಟನೆ ಯನ್ನು ತಾಲೂಕ್ ಪಂಚಾಯತ್ ಇಒ ಕುಸುಮದಾರ ಇವರು, ನಾವೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ತಾಲೂಕ್ ಪಂಚಾಯತಿ ನ ಮೆನೇಜರ್ ಪ್ರಶಾಂತ್, ನವೋದಯ ಮಂಡಲದ ಅಧ್ಯಕ್ಷರ ಹರೀಶ್ ನಾವೂರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೇಲ್ವಿಚಾರಕರಾದ ಸಾಂತಪ್ಪ, ತಾಲೂಕು ಪಂಚಾಯತಿನ ಅಧಿಕಾರಿ ವರ್ಗ, ಗ್ರಾಮ ಪಂಚಾಯತಿನ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು

Sushma K

Recent Posts

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

10 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

34 mins ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

2 hours ago

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

2 hours ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

2 hours ago