Categories: ಮಂಗಳೂರು

ಬೆಳ್ತಂಗಡಿ: ಎಸ್.ಡಿ.ಎಮ್ ಆಂಗ್ಲಮಾಧ್ಯಮ ಶಾಲೆಯಲ್ಲಿ ವಿನೂತನ ಕಾರ್ಯಕ್ರಮಕ್ಕೆ ಚಾಲನೆ

ಬೆಳ್ತಂಗಡಿ: ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆಯಲ್ಲಿ ವಿನೂತನ ಕಾರ್ಯಕ್ರಮ ತನು ಸ್ಪಂದಿಸದವರ ಮನ ಸ್ಪಂದಿಸುವ, ಹಾಸಿಗೆ ಬಿಟ್ಟು ಮೇಲೇಳಲಾಗದವರ ಮನೆ ಮನೆಗೆ ಹೋಗಿ ಅವರಿಗೆ ಸಾಂತ್ವನದ ನುಡಿಗಳನ್ನಾಡಿಸಿ ಹಾಡು ಹರಟೆಯೊಂದಿಗೆ ಎಪ್ಪತ್ತೈದನೆಯ ಸ್ವಾತಂತ್ರ್ಯದಿನಾಚರಣೆಯ ಸವಿಯನ್ನುಣಿಸುವ ಕಾರ್ಯಕ್ರಮ ತುಡಿತಕ್ಕೆ ಇಂದು ಚಾಲನೆ ನೀಡಲಾಯಿತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಹಾಗೂ ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ ಶ್ರೀ.ಬಿ.ಸೋಮಶೇಖರ.ಶೆಟ್ಟಿಯವರು ನೆರವೇರಿಸಿದರು. ನಂತರ ಮಾತನಾಡಿದ ಅವರು ಶಾಲಾ ಪರಿಸರದಲ್ಲಿ ಇಂತಹ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಕ್ಕೆ ಶ್ಲಾಘಿಸಿದರು.

ವಿದ್ಯಾರ್ಥಿಗಳಿಗೆ ಜೀವನದ ನೈಜ ಚಿತ್ರಣ ಹಾಗೂ ಅನೇಕ ಅನುಭವಗಳನ್ನು ಒದಗಿಸಿಕೊಡುವುದು ಇಂತಹ ಕಾರ್ಯಕ್ರಮ. ಎಲ್ಲವೂ ಇದ್ದು ಎನೂ ಇಲ್ಲ ಎಂಬುದನ್ನು ಕೊರಗುವ ಬದಲು ಇಂತಹ ವ್ಯಕ್ತಿಗಳನ್ನು ಕಂಡು ಜೀವನಾನುಭವ ಪಡೆದು ಸಾರ್ಥಕ ಬದುಕು ನಡೆಸಬೇಕು. ತಾನೂ ಬಾಳಿ ಇತರರನ್ನು ಬಾಳಲು ಬಿಡಬೇಕು.ಸಾಧ್ಯವಾದಷ್ಟು ನಮ್ಮ ಕೈಲಾದ ಸಹಾಯವನ್ನು ಮಾಡುವ ಪಣತೊಡಬೇಕು ಎಂದರು.

ನಂತರ ಮಾತನಾಡಿದ ಬಾರತೀಯ ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಇದರ ಸದಸ್ಯರಾಗಿರುವ ಶ್ರೀ. ಶಿವಕುಮಾರ್ ಎಸ್.ಎಂ.ಮಾತನಾಡುತ್ತಾ ಅನುಭವಗಳು ಹೊಸತಲ್ಲ ಅದರಿಂದ ಕಲಿತ ಪಾಠ ಹೊಸತು.ಶಾಲೆ ಕೇವಲ ಪಠ್ಯಕ್ಕೆ ಮಾತ್ರ ಸೀಮಿತ ಆಗಿರದೆ ಜೀವನಕ್ಕಾಗುವ‌ ಅನುಭವಗಳನ್ನು ನೀಡಬೇಕು. ಆ ಕೆಲಸ ಈ ಶಾಲೆಯಲ್ಲಾಗುತ್ತಿದೆ. ಯಾವುದೇ ಕ್ಷಣದಲ್ಲಾಗಲಿ ಧೃತಿಗೆಡದೆ ಬದುಕುವ ಕಲೆ ವಿದ್ಯಾರ್ಥಿಗಳಿಗೆ ರೂಢಿಯಾಗೋದು ಪ್ರಾಪಂಚಿಕ ಅನುಭವಗಳನ್ನು ತೆರೆದಿಟ್ಟಾಗಲೇ. ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಉತ್ತಮ ವಿದ್ಯಾರ್ಥಿಗಳು ಆಗಿ ಮಾದರಿಯಾಗಿರಿ. ಸಹಾಯ ಮಾಡುವ ಹಸ್ತ ನೊಂದವರ ಕಣ್ಣೀರು ಒರಸುವ ಹಸ್ತ ನಿಮ್ಮದಾಗಲಿ ಎಂದು ನುಡಿದರು.

ತದನಂತರ‌‌ ಸಂಜೆವಾಣಿ ಪತ್ರಿಕೆಯ ವರದಿಗಾರರಾಗಿರುವ ಶ್ರೀ ಧನಕೀರ್ತಿ ಆರಿಗ ಇವರು ಕಾರ್ಯಕ್ರಮವನ್ನು ಶ್ಲಾಘಿಸಿ ಕಾರ್ಯಕ್ರಮದ ಯಶಸ್ವಿಗೆ ಶುಭ ಹಾರೈಸಿದರು. ಇಂತಹ ಕಾರ್ಯಕ್ರಮಗಳು ಎಲ್ಲರಿಗೂ ಮಾದರಿಯಾಗಲಿ ಹಾಗೂ ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮದ ಸದುಪಯೋಗವನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಾಡುವಂತಾಗಲಿ, ಈ ಕಾರ್ಯಕ್ರಮವು ಇನ್ನಷ್ಟು ಕಡೆಗಳಲ್ಲಿ ವಿಸ್ತರಿಸಲಿ ಎಂದು ಶುಭ ಹಾರೈಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ. ಪ್ರಾಸ್ತಾವಿಕ ನುಡಿಗಳೊಂದಿಗೆ ಎಲ್ಲರನ್ನೂ ಸ್ವಾಗತಿಸಿದರು. ಶಾಲಾ ಶಿಕ್ಷಕ ಶ್ರೀ.ಕಾರ್ತಿಕೇಶ್ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಕುಮಾರಿ ಸ್ಪೂರ್ತಿ ವಂದಿಸಿದರು. ಶಾಲೆಯ ಯುವ ರೆಡ್ ಕ್ರಾಸ್ ಆರೋಗ್ಯ ಹಾಗೂ ನೈರ್ಮಲ್ಯ ಸಂಘದವರು ನೆರವೇರಿಸಿದ ಈ ಕಾರ್ಯಕ್ರಮದಲ್ಲಿ ಶಾಲಾ‌ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸಾಕ್ಷಿಗಳಾದರು. ತದನಂತರ ಹಾಸಿಗೆ ಹಿಡಿದಿರುವ ಅಂತಹ ವ್ಯಕ್ತಿಗಳನ್ನು ಗುರುತಿಸಿ ಅವರ ಮನೆಗಳಿಗೆ ತೆರಳಿ ಹಾಡು ಹರಟೆ ಮಾತುಕತೆ ಇತ್ಯಾದಿಗಳ ಮುಖಾಂತರ ಸ್ವಾತಂತ್ರ್ಯ ಭಾರತದ ಎಪ್ಪತೈದನೇ ವರ್ಷದ ಸವಿಯನ್ನು ಅವರ ಮನಗಳಿಗೆ ತಲುಪುವಂತೆ, ಸದಾ ಹಸಿರಾಗಿರುವಂತೆ ಮಾಡಲಾಯಿತು.

ಹಣ್ಣು, ಹಂಪಲು ಜೇನು ಹಾಗೂ ಅಲ್ಪ ಮೊತ್ತದ ಧನ ಸಹಾಯ ವನ್ನು ವಿಧ್ಯಾರ್ಥಿಗಳು ಸ್ವಯಂ ಪ್ರೇರಿತವಾಗಿ ಮಾಡಿದರು. ಅಗತ್ಯವಿದ್ದವರಿಗೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಜೊತೆಗೂಡಿ ಧನ ಸಂಗ್ರಹ ಮಾಡಿ ತಮ್ಮ ಕೈಲಾದ ಧನಸಹಾಯ ಮಾಡಿದರು.ಮನೆ ಮನೆಯ ಭೇಟಿ ಸಂಧರ್ಭದಲ್ಲಿ ಭಾರತೀಯ ರೆಡ್ ಕ್ರಾಸ್ನ ತಾಲೂಕು ಘಟಕದ ಅಧ್ಯಕ್ಷರಾದ‌. ಹರಿದಾಸ್ ಎಸ್.ಎಂ.ಹಾಗೂ ಸದಸ್ಯರಾದ ಸುಕನ್ಯ ಜೊತೆಗೆ ಸುಹಾಸ್ ಜೊತೆಯಾಗಿದ್ದರು.

ನಿಜವಾದ ಅರ್ಥದಲ್ಲಿ ಸ್ವಾತಂತ್ರ್ಯದ ಅಮೃತಮಹೋತ್ಸವ ಎಲ್ಲರ ಮನೆಗಳಿಗೂ ತರುವುದೆಂದರೆ ಇದೇ‌ ಅಲ್ಲವೇ?

Gayathri SG

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

2 hours ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

2 hours ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

3 hours ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

3 hours ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

3 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

3 hours ago