ಬೆಳ್ತಂಗಡಿ: ಚಾರ್ಮಾಡಿ ಘಾಟಿ ಪ್ರದೇಶಕ್ಕೆ ಲೋಕೋಪಯೋಗಿ ಇಲಾಖೆ ರಾಜ್ಯ ಕಾರ್ಯದರ್ಶಿ ಶ್ರೀ ಕೃಷ್ಣ ರೆಡ್ಡಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಭೇಟಿ ನೀಡಿ ಪ್ರದೇಶದ ಸ್ಥಿತಿಗತಿ,ಕಾಮಗಾರಿ ವೀಕ್ಷಣೆ ನಡೆಸಿದರು.
ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿಯಲ್ಲಿ ಎರಡು ವರ್ಷಗಳ ಹಿಂದೆ ಭೂಕುಸಿತ,ಕಣಿವೆ ಭಾಗದಲ್ಲಿ ಕುಸಿತ, ಹಾಗೂ ಮಳೆ ಗಾಳಿಗೆ ರಸ್ತೆ ಹಾಗೂ ತಡೆಗೋಡೆಗಳು ಸಂಪೂರ್ಣ ಹಾನಿಯಾಗಿದ್ದವು.
ಈಗಾಲೇ ರಸ್ತೆ ಕೆಲಸ ತಾತ್ಕಾಲಿಕ ಮುಗಿದಿದ್ದು, ರಸ್ತೆ ಎರಡು ಬದಿ ಕೆಲವು ಕಡೆ ತಡೆಗೋಡೆ ಕಾಮಗಾರಿ ನಡೆಯುತ್ತಿದ್ದು ಮುಕ್ತಾಯ ಹಂತದಲ್ಲಿದೆ. ಮಳೆಗಾಲದಲ್ಲಿ ಯಾವುದೇ ತೊಂದರೆ ಯಾಗದಂತೆ ಘಾಟಿ ಪ್ರದೇಶ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಹಾಸನ ವಿಭಾಗ ಕಾರ್ಯ ನಿರ್ವಾಹಕ ಇಂಜಿನಿಯರ್ ಅರ್ಚನಾ, ಎ.ಇ.ಇ. ಮುನಿರಾಜ್, ಹಾಗೂ ಸಹಾಯಕ ಇಂಜಿನಿಯರ್ ಸಂತೋಷ್ ಇದ್ದರು.