News Karnataka Kannada
Friday, May 03 2024
ಮಂಗಳೂರು

ಬೆಳ್ತಂಗಡಿ: ನ. 28ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಕಾಲಮಿತಿಯ ಯಕ್ಷಗಾನ ಬಯಲಾಟ

Sri Kshetra Gejjegiri Kshetra Mahatme Time-bound Yakshagana Bayalata on Nov. 28
Photo Credit : By Author

ಬೆಳ್ತಂಗಡಿ: ಯಕ್ಷ ಬಳಗ ಬೆಳ್ತಂಗಡಿಯ ಆಶ್ರಯದಲ್ಲಿ ಯಕ್ಷ ಬಳಗ ಅಳದಂಗಡಿ ವಲಯ ಸಮಿತಿಯ ಸಹಕಾರದಲ್ಲಿ ಮೂಲಕ್ಷೇತ್ರ ಶ್ರೀ ಕ್ಷೇತ್ರ ಗೆಜ್ಜೆಗಿರಿ ಶ್ರೀ ಆದಿ ಧೂಮಾವತಿ ಶ್ರೀ ದೇಯಿಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿಯವರು ನ. 28ರಂದು ಸಂಜೆ ಗಂಟೆ 6-00ರಿಂದ ಅಳದಂಗಡಿಯ ಬಸ್ ನಿಲ್ದಾಣದ ಬಳಿ ಆಡಿ ತೋರಿಸಲಿರುವ ‘ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ’ ಎಂಬ ಕಥಾನಕದ ಕಾಲಮಿತಿಯ ಯಕ್ಷಗಾನ ಬಯಲಾಟದ ಆಮಂತ್ರಣ ಪತ್ರಿಕೆಯನ್ನು ನ. 17ರಂದು ಅಳದಂಗಡಿ ಅರಮನೆಯ ವಠಾರದಲ್ಲಿ ಡಾ| ಪದ್ಮಪ್ರಸಾದ್ ಅಜಿಲರು ಬಿಡುಗಡೆಗೊಳಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಯಕ್ಷ ಬಳಗದ ಗೌರವಾಧ್ಯಕ್ಷರಾದ ರಕ್ಷಿತ್ ಶಿವರಾಂ, ಅಧ್ಯಕ್ಷ ಸಂತೋಷ್ ಗೌಡ ವಳಂಬ್ರ, ಕಾರ್ಯದರ್ಶಿ ನಿತ್ಯಾನಂದ ನಾವರ, ಕೋಶಾಧಿಕಾರಿ ಶೇಖರ್ ಕುಕ್ಕೇಡಿ, ಅಳದಂಗಡಿ ವಲಯ ಯಕ್ಷ ಬಳಗದ ಗೌರವಾಧ್ಯಕ್ಷ ಸಂಜೀವ ಪೂಜಾರಿ ಕೊಡಂಗೆ, ಅಧ್ಯಕ್ಷ ಸುಭಾಶ್ಚಂದ್ರ ರೈ ಪಡ್ಯೋಡಿಗುತ್ತು, ಕಾರ್ಯದರ್ಶಿ ವೀರೇಂದ್ರ ಕುಮಾರ್ ಜೈನ್, ಕೋಶಾಧಿಕಾರಿ ಚಂದ್ರಶೇಖರ್ ಅಳದಂಗಡಿ ಹಾಗೂ ಯಕ್ಷ ಬಳಗದ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು