ಮಂಗಳೂರು

ಬೆಳ್ತಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಸರಕಾರದಿಂದ ಅನುದಾನ ದೊರಕಿಸಿಕೊಡುವಂತೆ ಮನವಿ

ಬೆಳ್ತಂಗಡಿ: ಪುನರ್ನಿರ್ಮಾಣ ಗೊಳ್ಳುತ್ತಿರುವ ಅಳದಂಗಡಿಯ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಸರಕಾರದಿಂದ ಅನುದಾನ ದೊರಕಿಸಿಕೊಡುವಂತೆ ಶಾಸಕ ಹರೀಶ್ ಪೂಂಜ ಅವರಿಗೆ ಜೀರ್ಣೋದ್ಧಾರದ ವತಿಯಿಂದ ಆದಿತ್ಯವಾರ ಶಾಸಕರ ನಿವಾಸದಲ್ಲಿ ಮನವಿ ಸಲ್ಲಿಸಲಾಯಿತು.

ಮನವಿಗೆ ತಕ್ಷಣ ಸ್ಪಂದಿಸಿದ ಶಾಸಕರು ರೂ.25 ಲಕ್ಷವನ್ನು ಜೀರ್ಣೋದ್ಧಾರಕ್ಕಾಗಿ ಮಂಜೂರು ಮಾಡಿಸಿಕೊಡುವುದಾಗಿ ಮತ್ತು ಮುಂದಿನ‌‌ ಹದಿನೈದು ದಿನಗಳೊಳಗಾಗಿ ದೇವಳದ ಖಾತೆಗೆ ಜಮೆ ಮಾಡಿಸುವುದಾಗಿ ಭರವಸೆಯಿತ್ತರು. ಅಲ್ಲದೆ ಮುಂದೆ ನಡೆಯುವ ಬ್ರಹ್ಮಕಲಶೋತ್ಸವಕ್ಕೆ ಸಂಪೂರ್ಣ ಸಹಕಾರ ಹಾಗೂ ನೇತೃತ್ವ ನೀಡುವುದಾಗಿ ತಿಳಿಸಿದರು.

ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಂಗಾಧರ ಮಿತ್ತಮಾರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾl ಶಶಿಧರ ಡೋಂಗ್ರೆ, ಕೋಶಾಧಿಕಾರಿ ಅನಿಲ್ ಕುಮಾರ್, ಸದಸ್ಯರುಗಳಾದ ಸುರೇಶ್ ಶೆಟ್ಟಿ, ಜಗನ್ನಾಥ ಶೆಟ್ಟಿ, ಸದಾನಂದ ಪೂಜಾರಿ ಉಂಗಿಲಬೈಲು, ಶಿವ ಭಟ್ ಕಟ್ಟೂರು, ವಿಶ್ವನಾಥ ಹೊಳ್ಳ, ನಿರಂಜನ ಜೋಶಿ, ಮೋಹನದಾಸ, ಪ್ರಕಾಶ್ ಶೆಟ್ಟಿ‌ , ಸಂತೋಷ್ ಕಾಪಿನಡ್ಕ,‌ ಸೋಮನಾಥ ಬಂಗೇರ, ಮಂಜುನಾಥ ಆಚಾರ್ಯ, ಹರೀಶ್ ಪೂಜಾರಿ, ಶಶಿಧರ ಅಳದಂಗಡಿ, ವಿಜಯ ಕುಮಾರ ನಾವರ, ಗ್ರಾ.ಪಂ.ಸದಸ್ಯರುಗಳು, ಸ್ಥಳೀಯರು ಉಪಸ್ಥಿತರಿದ್ದರು.

Sneha Gowda

Recent Posts

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

28 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

47 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

1 hour ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

1 hour ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

2 hours ago