News Karnataka Kannada
Monday, April 29 2024
ಮಂಗಳೂರು

ಬೆಳ್ತಂಗಡಿ: ವಿದ್ಯಾರ್ಥಿಗಳು ವಿವೇಕಾನಂದರ ಜೀವನ ಚರಿತ್ರೆಯನ್ನು ಅದ್ಯಯನ ಮಾಡಿಕೊಳ್ಳಬೇಕು- ಪೂಂಜಾ

Belthangady: Students should study vivekananda's biography: Poonja
Photo Credit : News Kannada

ಬೆಳ್ತಂಗಡಿ: ಸ್ವಾಮಿ ವಿವೇಕಾನಂದರ ತತ್ವ, ಆದರ್ಶಗಳನ್ನು ಇಟ್ಟುಕೊಂಡು ಇಂದು ಅನೇಕ ಮಹನೀಯರು ಶ್ರೇಷ್ಟ ವ್ಯಕ್ತಿಗಳಾಗಿದ್ದಾರೆ. ಇಡೀ ಭಾರತವನ್ಬು ಜಗತ್ತು ನೋಡುವಂತೆ ಮಾಡಿದ ಕೀರ್ತಿ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ. ಅಂತಹ ಕಾರ್ಯವನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಮಾಡುವ ಕನಸುಕಾಣಬೇಕು.ಅದಕ್ಕಾಗಿ ನಿತ್ಯ ವಿವೇಕಾನಂದರ ಜೀವನ ಚರಿತ್ರೆ ಅದ್ಯಯನ ಮಾಡಬೇಕು. ಅದಕ್ಕೆ ಪೂರಕವಾಗಿ ಇಲ್ಲಿನ ವಿದ್ಯಾರ್ಥಿಗಳಿಗೆ ವಿವೇಕಾನಂದರ ಉಚಿತ ಪುಸ್ತಕ ನೀಡಲಾಗುವುದು ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ದ.ಕ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾ.ಪಂ. ಬೆಳ್ತಂಗಡಿ, ದ.ಕ.ಜಿಲ್ಲಾ ಯುವಜನ ಒಕ್ಕೂಟ ಹಾಗೂ ತಾಲೂಕು ಯುವಜನ ಒಕ್ಕೂಟ ಬೆಳ್ತಂಗಡಿ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಪ್ರಯುಕ್ತ ಶುಕ್ರವಾರ ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ನಡೆದ ವಿವೇಕರಥ ಯುವಪಥ… ಯುವಜಾಗೃತಿ ಜಾಥಾ ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮಾತನಾಡಿ, ಬದುಕನ್ನು ಕಟ್ಟಿಕೊಳ್ಳುವ ಶಕ್ತಿ ಪ್ರತಿಯೊಬ್ವರಿಗೂ ಇದೆ.ಅದನ್ನು ಜಾಗ್ರುತಿಗೊಳಿಸುವ ಪ್ರಯತ್ನ ಮಾಡಬೇಕು. ಸಹೋದರತೆಯ ಭಾವಗಳನ್ನು ಬೆಳೆಸಿಕೊಂಡಾಗ ಜಗತ್ತನ್ಬು ಗೆಲ್ಲಬಹುದು.ಇದಕ್ಜೆ ಉದಾಹರಣೆ ಸ್ವಾಮಿ ವಿವೇಕಾನಂದರು ಎಂದರು. ಉಜಿರೆ ಎಸ್.ಡಿ.ಎಂ. ಪ.ಪೂ.ಕಾಲೇಜು ಕನ್ನಡ ಉಪನ್ಯಾಸಕ ಮಹಾವೀರ ಜೈನ್ ದಿಕ್ಸೂಚಿ ಭಾಷಣ ಮಾಡಿದರು. ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟ ಅಧ್ಯಕ್ಷ ರಮಾನಂದ ಸಾಲಿಯಾನ್ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು.

ಪ.ಪಂ. ಉಪಾಧ್ಯಕ್ಷ ಜಯಾನಂದ ಗೌಡ, ಜಿಲ್ಲಾ ಯುವಜನ ಮತ್ತು ಕ್ರೀಡಾ ಇಲಾಖೆ ಜಿಲ್ಲಾ ನೋಡಲ್ ಅಧಿಕಾರಿ ಮಾಮಚ್ಚನ್, ದ.ಕ.ಜಿಲಾ ಯು.ಒ. ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ತಾಲೂಕು ಗೌರವಾಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಸ್ಥಾಪಕಾಧ್ಯಕ್ಷ ಕೆ.ಜಿ.ಗೋಖಲೆ, ತಾ.ಪಂ. ವ್ಯವಸ್ಥಾಪಕ ಡಿ ಪ್ರಶಾಂತ್, ಸ.ಪ.ಪೂ.ಕಾಲೇಜು ಉಪ ಪ್ರಾಂಶುಪಾಲ ಆನಂದ್ ಡಿ., ಯು.ಒ.ಮಾಜಿ ಅಧ್ಯಕ್ಷ ಲೋಕೇಶ್ ಶೆಟ್ಟಿ, ಮೇಲ್ವಿಚಾರಕ ಸಾಂತಪ್ಪ ಉಪಸ್ಥಿತರಿದ್ದರು.

ದ.ಕ.ಜಿಲ್ಲಾ ಯು.ಒ. ಗೌರವಾಧ್ಯಕ್ಷ ರಾಜೀವ್ ಸಾಲಿಯಾನ್ ಪ್ರಾಸ್ತಾವಿಸಿದರು. ಜಿಲ್ಲಾ ಯ.ಒ.ನಿರ್ದೇಶಕ ವಿಜಯ ಗೌಡ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸದಾಶಿವ ಹೆಗ್ಡೆ ವಂದಿಸಿದರು. ಚಂದ್ರಹಾಸ ಬಳಂಜ ,ಸ್ಮಿತೇಶ್ ಬಾರ್ಯ ಕಾರ್ಯಕ್ರಮ ನಿರೂಪಿಸಿದರು.

ಫೋಟೋ: ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಪ್ರಯುಕ್ತ ನಡೆದ ವಿವೇಕರಥ ಯುವಪಥ, ಯುವಜಾಗೃತಿ ಜಾಥಾ ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು