ಬೆಳ್ತಂಗಡಿ: ಭಾರತದ ಸ್ವತಂತ್ರ ಸಂಗ್ರಾಮದ ಇತಿಹಾಸದಲ್ಲಿ ಮರೆತು ಹೋದ ಕ್ಷಣಗಳನ್ನು ಮೆಲುಕು ಹಾಕುವ ಭಾಗವಾಗಿ ದೇಶಾದ್ಯಂತ ಹರ್ ಘರ್ ತಿರಂಗ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಭಾರತವು ೨೦೦ ವರ್ಷಗಳ ಸ್ವಾತಂತ್ರ್ಯ ಹೋರಟದ ಫಲವಾಗಿ ಸ್ವಾತಂತ್ರ್ಯಗೊಂಡಿತು. ಎಂದು ತಹಶೀಲ್ದಾರ್ ಪೃಥ್ವಿ ಸಾನಿಕಮ್ ಆಶಿಸಿದರು.
ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಆಡಳಿತ ಸೌಧ ಮುಂಭಾಗ ೭೬ ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಧ್ಜಜಾರೋಹಣ ನೆರವೇರಿಸಿ ಮಾತನಾಡಿದರು. ಭವಿಷ್ಯದ ಪೀಳಿಗೆ ದೇಶದ ಏಕತೆ ಸಮಗ್ರತೆಗಾಗಿ ದೃಢ ಸಂಕಲ್ಪ ತೊಡಬೇಕು ಎಂದರು.
ಶಾಸಕ ಹರೀಶ್ ಪೂಂಜ ಧ್ಜಜವಂದನೆ ಸಲ್ಲಿಸಿದರು. ನಿವೃತ್ತ ಸೇನಾಧಿಕಾರಿ ಎಂ.ಆರ್.ಜೈನ್, ಪ.ಪಂ. ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್, ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೆ., ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಎಚ್.ಎಸ್., ತಾ.ಪಂ. ಇಒ ಕುಸುಮಾಧರ್ ಬಿ., ಲೋಕೋಪಯೋಗಿ ಇಲಾಖೆ ಎಇಇ ಶಿವಪ್ರಸಾದ್ ಅಜಿಲ, ಮೆಸ್ಕಾಂ ಎಇಇ ಶಿವಶಂಕರ್, ಸಹಾಯಕ ಕೃಷಿ ನಿರ್ದೇಶಕ ರಂಜಿತ್ ಟಿ.ಎನ್., ಸಿಡಿಪಿಒ ಪ್ರಿಯಾ ಆಗ್ನೆಸ್ ಚಾಕೊ, ಪೊಲೀಸ್ ಉಪನಿರೀಕ್ಷಕರಾದ ನಂದಕುಮಾರ್, ಸೌಮ್ಯ, ಕೃಷ್ಣಕಾಂತ್ ಪಾಟೀಲ್, ಸುತೇಶ್ ಉಪಸ್ಥಿತರಿದ್ದರು.
ಬೆಳ್ತಂಗಡಿ ಸಂತ ತೆರೆಸಾ ಶಾಲೆ ಹಾಗೂ ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಷ್ಟಗೀತೆ, ಧ್ವಜ ಗೀತೆ, ವಂದೇಮಾತರಂ ನಾಡಗೀತೆ, ರೈತಗೀತೆ ಹಾಡಿದರು. ಪೊಲೀಸ್ ಇಲಾಖೆ ಹಾಗೂ ಗೃಹರಕ್ಷ ದಳದ ಸಿಬಂದಿ ಪಥಸಂಚಲನ ನಡೆಸಿದರು.