ಬೆಳ್ತಂಗಡಿ: ತಾಲೂಕು ಪಂಚಾಯತ್ ಇ.ಒ. ಕುಸುಮಾಧರ ಬಿ. ಅವರು ಮಲವಂತಿಗೆ, ಮಿತ್ತಬಾಗಿಲು, ಕಡಿರುದ್ಯಾವರ ಗ್ರಾಮಗಳ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನದಿಗಳ ಹರಿವು ಏರಿಕೆಯಾಗುತ್ತಿರುವ ಕಾರಣ ಪ್ರದೇಶದ ಜನರು ಎಚ್ಚರಿಕೆಯಿಂದ ಹಾಗೂ ಸ್ಥಳೀಯ ಪಂಚಾಯಿತಿಗಳು ಸನ್ನದ್ಧ ಸ್ಥಿತಿಯಲ್ಲಿರುವಂತೆ ಸೂಚನೆ ನೀಡಿದರು.
ಚಾರ್ಮಾಡಿ ಘಾಟಿಯಲ್ಲಿ ಇದುವರೆಗೆ ಯಾವುದೇ ತೊಂದರೆಗಳು ಕಂಡುಬಂದಿಲ್ಲ. ಮುಂಡಾಜೆ, ಕಾಯರ್ತೋಡಿ ಪ್ರದೇಶಗಳಲ್ಲಿ ನೇತ್ರಾವತಿ ನದಿ ನೀರು ತಗ್ಗು ಪ್ರದೇಶಗಳಲ್ಲಿನ ತೋಟಗಳಿಗೆ ನೀರು ನುಗ್ಗಿದೆ.