ಬೆಳ್ತಂಗಡಿ: ಇಲ್ಲಿನ ಸಂತೆಕಟ್ಟೆಯ ಹೋಟೆಲ್ ಒಂದರಲ್ಲಿ ಅಡುಗೆ ಸಹಾಯಕನಾಗಿ ಕೆಲಸ ಮಾಡಿಕೊಂಡಿದ್ದ ಖಾಲಿದ್ (55) ಎಂಬವರು, ತಮ್ಮ ಬಾಡಿಗೆ ರೂಮಿನಲ್ಲಿ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ಸೆ.25ರಂದು ರಾತ್ರಿ ನಡೆದಿದೆ. ಈ ಬಗ್ಗೆ ಅಬುಬಕರ್ ಎಂ.ಎಚ್. ಎಂಬವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.
ಬಂಟ್ವಾಳ ತಾಲೂಕಿನ ಮುಡೂರು ಗ್ರಾಮದ ನಿವಾಸಿಯಾಗಿದ್ದ ಮೃತ ವ್ಯಕ್ತಿ ಬೆಳ್ತಂಗಡಿಯ ಕುತ್ಯಾರು ಸಮೀಪ ಬಾಡಿಗೆ ರೂಮಿನಲ್ಲಿ ವಾಸವಾಗಿದ್ದು ಹಗಲು ಹೊತ್ತು ಹೋಟೆಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು.