Categories: ಮಂಗಳೂರು

ಬೆಳ್ತಂಗಡಿ: ಕೆಲಸ ಕಾರ್ಯಗಳು ಯಶಸ್ವಿಯಾಗಲು ಮಾತೃಶಕ್ತಿಯ ಸಹಕಾರ ಬೇಕು

ಬೆಳ್ತಂಗಡಿ: ಯಾವುದೇ ಕೆಲಸ ಕಾರ್ಯಗಳು ಯಶಸ್ವಿಯಾಗಿ ಜರಗಲು ಮಾತೃಶಕ್ತಿಯ ಸಹಕಾರ ನಿರಂತರವಾಗಿರಬೇಕು. ಮಹಿಳೆಯರು ತಂಡವಾಗಿ ಕಾರ್ಯಗಳನ್ನು ಕೈಗೆತ್ತಿಕೊಂಡರೆ ಕೆಲಸಗಳು ಸುಲಲಿತವಾಗಿ ನಡೆಯುತ್ತವೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ಬುಧವಾರ ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಂಗವಾಗಿ ಜರಗಿದ ಮಹಿಳಾ ಸಮಾವೇಶ ಹಾಗೂ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ದೇವಸ್ಥಾನಗಳ ಬ್ರಹ್ಮಕಲಶ,ಜೀರ್ಣೋದ್ಧಾರಗಳು ಊರಿನ ಶಾಂತಿ,ನೆಮ್ಮದಿ, ಅಭಿವೃದ್ಧಿಗೆ ಕಾರಣವಾಗುತ್ತವೆ. ಈ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಅವಕಾಶ ಅಪರೂಪ. ಸಿಕ್ಕಿರುವ ಅವಕಾಶವನ್ನು ಭಕ್ತಿ, ಶ್ರದ್ಧೆಯಿಂದ ಬಳಸಿಕೊಂಡು ದೇವರ ಕಾರ್ಯದಲ್ಲಿ ಭಾಗಿಯಾಗುವಂತೆ ಹೇಳಿದರು.

ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ತುಕಾರಾಮ ಸಾಲಿಯಾನ್,ಉಪಾಧ್ಯಕ್ಷರಾದ ಶ್ರೀನಿವಾಸ್ ರಾವ್,ರವಿ ಕುಮಾರ್ ಭಟ್,ಖಜಾಂಚಿ ಪಾಂಡುರಂಗ ಕಾಕತ್ಕರ್,ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ್,ಮಹಿಳಾ ಸಮಿತಿ ಅಧ್ಯಕ್ಷೆ ಚಿತ್ರಾ ಭಿಡೆ, ಶಶಿಧರ ಕಲ್ಮಂಜ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ಮಂಜುನಾಥ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮಗಳು ಜ. 31ರಿಂದ ಫೆ.5ರ ತನಕ ಹಾಗೂ ವಾರ್ಷಿಕ ಜಾತ್ರೆ ಫೆ.6ರಂದು ನಡೆಯಲಿದೆ. ಫೆ.2ರಂದು ಮಾತೃ ಸಂಗಮ ಕಾರ್ಯಕ್ರಮ ಆಯೋಜಿಸುವ ಕುರಿತು ನಿರ್ಣಯಿಸಲಾಯಿತು. ಪ್ರತಿವಾರ ದೇವಸ್ಥಾನದ ವಠಾರದಲ್ಲಿ ಶ್ರಮದಾನ,ಸ್ವಚ್ಛತೆ ಇತ್ಯಾದಿ ಕಾರ್ಯಕ್ರಮಗಳು ನಡೆಯಲಿದ್ದು ಊರವರ ಸಹಕಾರ ಕೋರಲಾಯಿತು.

50 ಲಕ್ಷ ರೂ. ಅನುದಾನ, ರಸ್ತೆ ಅಭಿವೃದ್ಧಿ

ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಇತರ ಕಾಮಗಾರಿಗಳಿಗೆ ಧಾರ್ಮಿಕ ದತ್ತಿ ಇಲಾಖೆ ಮೂಲಕ 50 ಲಕ್ಷ ರೂ. ಅನುದಾನ ಹಾಗೂ ಬ್ರಹ್ಮಕಲಶೋತ್ಸವದ ಸಮಯದೊಳಗೆ ದೇವಸ್ಥಾನದ ಸಂಪರ್ಕ ರಸ್ತೆಯನ್ನು ಅಭಿವೃದ್ಧಿ ಪಡಿಸುವ ಕುರಿತು ಶಾಸಕರು ಭರವಸೆ ನೀಡಿದರು.

Ashika S

Recent Posts

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

19 mins ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

20 mins ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

32 mins ago

ಗೆಳಯನಿಗೆ ಸಾತ್‌ ನೀಡಲು ಹೋಗಿದ್ದ ಅಲ್ಲು ವಿರುದ್ಧ ಕೇಸ್ ದಾಖಲು

ಪುಷ್ಪಾ-2 ರಿಲೀಸ್​ ಕ್ರೇಜ್​ನಲ್ಲಿರೋ ಐಕಾನ್​ ಸ್ಟಾರ್ ಅಲ್ಲು ಅರ್ಜುನ್​ಗೆ ಆಂಧ್ರ ಪ್ರದೇಶ ಪೊಲೀಸರು ಬಿಗ್ ಶಾಕ್ ನೀಡಿದ್ದು, ಅಲ್ಲು ಅರ್ಜುನ್…

35 mins ago

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ…

57 mins ago

ಆರು ತಿಂಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಬದರಿನಾಥ

ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…

1 hour ago