ಬೆಳ್ತಂಗಡಿ, ಡಿ.31: ಓಡಿಲ್ನಾಳ ಶ್ರೀರಾಮನಗರ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಡಿ.30 ರಂದು ದೇವರ ಪ್ರತಿಷ್ಠೆ ನಡೆಯಿತು.
ನೀಲೇಶ್ವರ ಆಲಂಬಾಡಿ ವೇದಮೂರ್ತಿ ಶ್ರೀ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಪ್ರಾತಃಕಾಲ 4 ರಿಂದ ಗಣಹೋಮ, ತ್ರಿಕಾಲಪೂಜೆ, ಅಂಕುರಪೂಜೆ, ಶಯ್ಯೆಯಲ್ಲಿ ಪೂಜೆ, ನಾಂದಿ ಪೂಜಾದಿಗಳು ನಡೆದು ಬೆಳಗ್ಗೆ 10.16 ರಿಂದ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವರ ಪ್ರತಿಷ್ಠೆ, ಗಣಪತಿ ಪ್ರತಿಷ್ಠೆ, ದುರ್ಗಾ ಪ್ರತಿಷ್ಠೆ ಬಳಿಕ ಪೀಠ ಪ್ರತಿಷ್ಠೆ ಜತೆಗೆ ಅಷ್ಟಬಂಧಕ್ರಿಯೆ, ಕುಂಭೇಶಕಲಶಾಭಿಷೇಕ, ನಿದ್ರಾಕಲಶಾಭಿಷೇಕ ಪ್ರತಿಷ್ಠಾಬಲಿ ನೆರವೇರಿತು.
ಮಧ್ಯಾಹ್ನ 12.30 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆದು ಸಾಯಂಕಲಾ 5 ರಿಂದ ನಿತ್ಯಪೂಜಾ ವಿಧಾನ ನಿರ್ಣಯ, ಭದ್ರದೀಪ ಪ್ರತಿಷ್ಠೆ, ಕವಾಟಬಂಧನ, ತ್ರಿಕಾಲ ಪೂಜೆ, ಅಂಕುರ ಪೂಜೆ, ಮಂಟಪದಲ್ಲಿ ರಾತ್ರಿ ಪೂಜೆ ನಡೆದು ರಾತ್ರಿ 8 ಗಂಟೆಗೆ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಸಾರ್ವಜನಿಕ ಅನ್ನಸಂತರ್ಪಣೆ ನೆರವೇರಿತು.
ಸಾಯಂಕಾಲ 5.30 ರಿಂದ 6.30 ರವರೆಗೆ ಓಡೀಲು ಶ್ರೀ ಮಹಾಲಿಂಗೇಶ್ವರ ಭಜನಾ ಕಾರ್ಯಕ್ರಮ ನೆರವೇರಿತು. ಈ ವೇಳೆ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ, ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಾಸಕ ಹರೀಶ್ ಪೂಂಜ, ಉದ್ಯಮಿ ಶಶಿಧರ್ ಶೆಟ್ಟಿ ಬರೋಡ, ಕಾರ್ಯಾಧ್ಯಕ್ಷ ಎಸ್.ಜಯರಾಮ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕೆ.ಚಂದ್ರಹಾಸ ಕೇದೆ, ಕೋಶಾಧಿಕಾರಿ ಗೋಪಾಲ ಶೆಟ್ಟಿ ಕೋರ್ಯಾರು, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ, ಪ್ರ.ಕಾರ್ಯದರ್ಶಿ ಧರಣೇಂದ್ರ ಕೆ.ಜೈನ್, ಕೋಶಾಧಿಕಾರಿ ಮನೋಹರ್ ಪಿ.ಸಿ., ಓಡಿಲ್ನಾಳ ಧರ್ಮೋತ್ಥಾನ ಟ್ರಸ್ಟ್ ಅಧ್ಯಕ್ಷ ಪಿ.ವೃಷಭ ಆರಿಗ ಸಹಿತ ವಿವಿಧ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.