News Karnataka Kannada
Monday, April 29 2024
ಮಂಗಳೂರು

ಬೆಳ್ತಂಗಡಿ: ರಾಜ್ಯದಲ್ಲಿ ಮುಂದಿನ ಬಾರಿಯೂ ಡಬಲ್ ಇಂಜಿನ್ ಸರಕಾರ ಬರಲಿದೆ- ಪ್ರಮೋದ್ ಸಾವಂತ್

Belthangady: There will be a double-engine government in the state next time too- Pramod Sawant
Photo Credit : News Kannada

ಬೆಳ್ತಂಗಡಿ: ಕಾಂಗ್ರೆಸ್‌ ಮತ್ತು ಜೆಡಿಎಸ್ ಪಕ್ಷಗಳು ತಮ್ಮ ಕುಟುಂಬಗಳನ್ನು ಪೋಷಿಸಿಕೊಂಡಿವೆಯೇ ಹೊರತು ಕರ್ನಾಟಕದ ವಿಕಾಸ ಮಾಡಿಯೇ ಇಲ್ಲ. ಕಳೆದ ಎಂಟು ವರ್ಷಗಳಲ್ಲಿ ಕೇಂದ್ರ – ರಾಜ್ಯದ ಅಭಿವೃದ್ಧಿ ಎಲ್ಲರ ಕಣ್ಣ ಮುಂದಿದೆ ಅದನ್ನು ಗ್ರಾಮ ಗ್ರಾಮಕ್ಕೆ ತಲುಪಿಸುವ ಕಾರ್ಯ ಆಗಬೇಕು ಎಂದು ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ ಮನವಿ ಮಾಡಿದರು.

ಅವರು ಭಾನುವಾರ ಬೆಳ್ತಂಗಡಿ ಪಟ್ಟಣದ ಮುಖ್ಯರಸ್ತೆಯಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಧಾನಿ‌ ಮೋದಿ, ಯಡಿಯೂರಪ್ಪ, ಬೊಮ್ಮಾಯಿಯವರ ಸಾಧನೆಗಳಿಂದ ಮುಂದಿನ ಬಾರಿಯೂ ರಾಜ್ಯದಲ್ಲಿ ಡಬಲ್ ಇಂಜಿನ್ ಸರಕಾರ ಬರಲಿದೆ. ಹಿಂದಿನ ಯು.ಪಿ.ಎ. ಹಾಗೂ ಈಗಿನ ಎನ್.ಡಿ.ಎ. ಸರಕಾರಗಳ ತುಲನೆ ಮಾಡಿದಾಗ ಈಗಿನ ಡಬಲ್ ಇಂಜಿನ ಸರಕಾರ ಅಭಿವೃದ್ಧಿ ಕಾರ್ಯಗಳು ಹೇಗಿವೆ ಎಂಬುದು ಅರಿವಾಗುತ್ತದೆ ಎಂದರು.

ಮುಂದಿನ ಬಾರಿ ರಾಜ್ಯದಲ್ಲಿ 150 ಸೀಟು ಪಕ್ಷಕ್ಕೆ ಸಿಗಲಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಉನ್ನತಿಯಾಗಲಿದೆ. ಕೇಂದ್ರದ ಹಾಗೂ ರಾಜ್ಯದ ರೈತರ, ಮಹಿಳೆಯರ, ಯುವಕರಿಗಾಗಿ ಮಾಡಿರುವ ಯೋಜನೆಗಳನ್ನು ಗ್ರಾಮಗಳಿಗೆ ಮುಟ್ಟಿಸುವ ಕೆಲಸವನ್ನು ಒಗ್ಗಟ್ಟಾಗಿ, ಜೊತೆಯಾಗಿ‌ ಮಾಡೋಣ, ನವಭಾರತ, ನವಕರ್ನಾಟಕ್ಕಾಗಿ ಸಂಕಲ್ಪಿಸೋಣ ಎಂದ ಅವರು ಇಂದಿನ ಸಂಕಲ್ಪ ಯಾತ್ರೆ ಶಾಸಕ ಹರೀಶ ಪೂಂಜ ಅವರ ವಿಜಯ ಯಾತ್ರೆಯಾಗಿ ಪರಿವರ್ತನೆಯಾಗಿದೆ ಎಂದು ಶ್ಲಾಘಿಸಿದರು.

ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ಅವರು, ಬೆಳ್ತಂಗಡಿಯಲ್ಲಿ ಪ್ರತಿಸ್ಪರ್ಧಿ ಚುನಾವಣೆಗೆ ನಿಲ್ಲುವ ಅವಶ್ಯಕತೆಯೇ ಇಲ್ಲ. ನಿಂತರೆ ಠೇವಣಿ ಕಳೆದುಕೊಳ್ಳುವುದು ಖಚಿತ‌. ಈ ಬಾರಿ ಪೂಂಜ ಅವರು 50,000 ಅಂತರದಲ್ಲಿ ಗೆಲ್ಲಲಿದ್ದಾರೆ ಎಂದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು, ಇಲ್ಲಿನ ಶಾಸಕರ ಕಾರ್ಯಗಳು ರಾಜ್ಯದ 224 ಕ್ಷೇತ್ರಗಳಿಗೆ ಮಾದರಿಯಾಗಿದೆ. ರಾಜ್ಯದಲ್ಲೇ ಅತಿ‌ಹೆಚ್ಚಿನ ಅಂತರದಿಂದ ಪೂಂಜ ಗೆಲ್ಲಲಿದ್ದಾರೆ ಎಂದರು.

ಸಚಿವ ಸುನಿಲ್‌ಕುಮಾರ್ ಅವರು, ಶಾಸಕರ ಅಭಿವೃದ್ಧಿ ಕಾರ್ಯಗಳು, ಚಟುವಟಿಕೆಗಳನ್ನು ಗ್ರಾಮಗಳಿಗೆ ತಲುಪಿಸುವ ಕೆಲಸ ಮಾಡೋಣ. ಪೂಂಜ ಅಭೂತಪೂರ್ವ ಜಯಸಾಧಿಸಲಿದ್ದಾರೆ ಎಂದರು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ವಿಜಯ ಸಂಕಲ್ಪ ಯಾತ್ರೆ ನಡೆಯಿತು. ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ದ.ಕ.‌ಜಿಲ್ಲಾ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ವಿಜಯ ಸಂಕಲ್ಪ ಯಾತ್ರೆ ಸಹ ಸಂಚಾಲಕ ದತ್ತಾತ್ರಿ ಎಸ್., ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ್, ಪ್ರ. ಕಾರ್ಯದರ್ಶಿ ಸುಧೀರ್ ಶೆಟ್ಟಿ, ಉಪಾಧ್ಯಕ್ಷ ಕೊರಗಪ್ಪ ನಾಯ್ಕ್, ಕಾರ್ಯದರ್ಶಿ ಧನಲಕ್ಷ್ಮೀ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರ. ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್ ಮತ್ತು ಗಣೇಶ್ ಗೌಡ, ಎಸ್ ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಚೆನ್ನಕೇಶವ ಉಪಸ್ಥಿತರಿದ್ದರು.

ಇಲ್ಲಿನ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಯಾತ್ರೆಯನ್ನು ಪ್ರಾರಂಭಿಸಲಾಯಿತು. ಶಾಸಕ ಹರೀಶ ಪೂಂಜ ಸ್ವಾಗತಿಸಿದರು. ಬೆಳ್ತಂಗಡಿ ಮುಖ್ಯರಸ್ತೆಯಲ್ಲಿ ಯಾತ್ರೆ ಮುಂದುವರಿದು ಲಾಯಿಲದಲ್ಲಿ ಮುಕ್ತಾಯಗೊಳಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು