ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಹನ್ನೊಂದನೇ ತಿರುವಿನಲ್ಲಿ ಭಾನುವಾರ ಪೊಲೀಸ್ ಡಿ.ಆರ್. ಮುಂದಕ್ಕೂ ಹಿಂದಕ್ಕೂ ಚಲಿಸಲಾಗದೆ ಗಂಟೆ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಯಿತು.
ಚಿಕ್ಕಮಗಳೂರಿನ ಪೊಲೀಸ್ ಡಿ.ಆರ್. ವಾಹನ ಚಲಿಸಲಾರದೆ ನಿಂತಿದ್ದರಿಂದ ಪ್ರವಾಸಿಗರು ಪರದಾಡುವಂತಾಯಿತು.ಎರಡು ಬದಿಯಿಂದ ವಾಹನಗಳು ಏಕಕಾಲದಲ್ಲಿ ಸಂಚರಿಸಲಾಗದೇ ಕಿ.ಮೀ ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ವಾಹನ ನಿಂತಿದ್ದರಿಂದ ಒಂದು ಬದಿ ವಾಹನ ಸಾಗಲು ಹರಸಾಹಸ ಪಡಬೇಕಾಯಿತು.ವಾರಾಂತ್ಯ ಆದುದರಿಂದ ವಾಹನಗಳ ಸಂಖ್ಯೆ ಹೆಚ್ಚಾಗಿತ್ತು.ಸಂಜೆ ಏಳು ಗಂಟೆ ವರೆಗೂ ವಾಹನ ರಿಪೇರಿ ಮಾಡಲಾಗುತ್ತಿತ್ತು.ಆದರೂ ಟ್ರಾಫಿಕ್ ಜಾಮ್ ನಿಂದ ಜನರು ತೊಂದರೆ ಅನುಭವಿಸಬೇಕಾಯಿತು ಎಂದು ಪ್ರಯಾಣಿಕ ಸತೀಶ್ ತಿಳಿಸಿದ್ದಾರೆ.