Categories: ಮಂಗಳೂರು

ಬೆಳ್ತಂಗಡಿ: ತುಳು ಶಿವಳ್ಳಿ ಸಭಾ ವತಿಯಿಂದ ಡಾ| ಹೆಗ್ಗಡೆಯವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ತಾಲೂಕು ತುಳು ಶಿವಳ್ಳಿ ಸಭಾ (ರಿ ) ದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಕರ್ನಾಟಕದಿಂದ ರಾಜ್ಯಸಭೆ ಸದಸ್ಯರಾಗಿ ನೇಮಕವಾದ ಪದ್ಮವಿಭೂಷಣ, ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ . ವೀರೇಂದ್ರ ಹೆಗ್ಗಡೆಯವರಿಗೆ ಭಕ್ತಿ ಪೂರ್ವಕ ಅಭಿನಂದನೆಯನ್ನು ಸಲ್ಲಿಸುತ್ತಾ, ತುಳು ಶಿವಳ್ಳಿ ಬ್ರಾಹ್ಮಣ ಸಮಾಜದ ನೂತನ ಸಭಾಭವನ ಕನ್ಯಾಡಿಯ “ಹರಿಹರಾನುಗ್ರಹ” ದ ಉದ್ಘಾಟನೆಯ ಆಮಂತ್ರಣ ಪತ್ರವನ್ನು ನೀಡುವುದರೊಂದಿಗೆ ಅವರನ್ನು ಗೌರವ ಪೂರ್ವಕ ವಾಗಿ ಆಹ್ವಾನಿಸಲಾಯಿತು.

ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷ ಶರತ್ ಕೃಷ್ಣ ಪಡ್ವಟ್ನಾಯರು ಡಾ!ಹೆಗ್ಗಡೆಯವರಿಗೆ ಕನ್ಯಾಡಿಯಲ್ಲಿ ನಿರ್ಮಾಣಗೊಂಡಿರುವ ಸಭಾಭವನ ಹಾಗೂ ಕಾಮಗಾರಿ ನಡೆಯುತ್ತಿರುವ ಅಯ್ಯಪ್ಪ ಸ್ವಾಮಿ ಹಾಗೂ ಪರಿವಾರ ದೇವತೆಗಳ ಗುಡಿ ನಿರ್ಮಾಣದ ಪೂರ್ಣ ಮಾಹಿತಿಯನ್ನು ನೀಡಿದರು.

ಅಯ್ಯಪ್ಪ ಸ್ವಾಮಿ ಹಾಗೂ ಪರಿವಾರ ದೇವತೆಗಳ ಗುಡಿ ಪುನರ್ ಪ್ರತಿಷ್ಠಾಪನೆ ಬಗ್ಗೆ ಮಾರ್ಗದರ್ಶನ ನೀಡುವಂತೆ ಅವರಲ್ಲಿ ವಿಜ್ಞಾಪಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ತುಳು ಶಿವಳ್ಳಿ ಸಭಾ ದ ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ, ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಶ್ರೀ ಜನಾರ್ದನ ಸ್ವಾಮಿ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಅಧ್ಯಕ್ಷ ಗಂಗಾಧರ ರಾವ್ ಕೆವುಡೇಲು, ತುಳು ಶಿವಳ್ಳಿ ಮ ಚ್ಚಿನ ವಲಯದ ಅಧ್ಯಕ್ಷ ಪ್ರೊ.! ಮಧೂರು ಮೋಹನ ಕಲ್ಲೂರಾಯ , ತಾಲೂಕು ತುಳು ಶಿವಳ್ಳಿ ಸಭಾ ದ ಉಪಾಧ್ಯಕ್ಷ ನಾಗೇಶ್ ರಾವ್, ಭಾಸ್ಕರ ರಾವ್, ಶಿಕ್ಷಕ ಸೂರ್ಯ ನಾರಾಯಣ ಪುತ್ರಾಯ,ನಿವೃತ್ತ ಶಿಕ್ಷಕ ಜನಾರ್ದನ ತೋಲ್ಪಾಡಿತ್ತಾಯ, ಹರ್ಷ ಕೆದ್ಲಾಯ ಮೊದಲಾದವರು ಉಪಸ್ಥಿತರಿದ್ದರು.

Sneha Gowda

Recent Posts

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

10 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

13 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

14 mins ago

ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…

36 mins ago

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

48 mins ago

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

57 mins ago