ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾ ವತಿಯಿಂದ ಕನ್ಯಾಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಸಭಾಭವನದ ಲೋಕಾರ್ಪಣ ಕಾರ್ಯಕ್ರಮದ ಕುರಿತು ವಿವಿಧ ವಲಯದ ಪದಾಧಿಕಾರಿಗಳ ಸಮಾಲೋಚನಾ ಸಭೆಯು ಆ.28 ರಂದು ಕನ್ಯಾಡಿಯಲ್ಲಿ ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ದೈವಜ್ಞರ ಸಲಹೆ ಹಾಗು ಪದಾಧಿಕಾರಿಗಳ ಒಮ್ಮತದ ಅಭಿಪ್ರಾಯದ ಮೇರೆಗೆ ನೂತನ ಸಭಾಭವನವನ್ನು ಅ 27 ಮತ್ತು 28 ರಂದು ವಿವಿಧ ಧಾರ್ಮಿಕ, ಸಭಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸರಳವಾಗಿ ನಡೆಸಲು ನಿರ್ಣಯಿಸಲಾಯಿತು. ಕೋಶಾಧಿಕಾರಿ ಗಿರೀಶ್ ಕುದ್ರೆನ್ತಯ ಪರವಾಗಿ ಭಾಸ್ಕರ ರಾವ್ ಸಭಾಭವನದ ಇದುವರೆಗಿನ ಖರ್ಚು ವೆಚ್ಚಗಳ ಲೆಕ್ಕಪತ್ರ ಮಂಡಿಸಿ ರೂ 1. 42 ಕೋಟಿ ಒಟ್ಟು ಖರ್ಚಾಗಿದ್ದು ಎಲ್ಲ ವಲಯ ಹಾಗೂ ದಾನಿಗಳಿಂದ ರೂ 1. 06ಕೋಟಿ ಸಂಗ್ರಹವಾಗಿದ್ದು,ಇನ್ನೂ ಸುಮಾರು ರೂ 40 ಲಕ್ಷ ಅಗತ್ಯವಿರುತ್ತದೆ ಎಂದರು.
ಅ 27 ರಂದು ಸಂಜೆ ವಾಸ್ತು,ರಾಕ್ಷೋಘ್ನ ಮತ್ತು ಸುದರ್ಶನ ಹವನ ಮತ್ತು ಆ. 28 ರಂದು ಬೆಳಿಗ್ಗೆ ಗಣಹೋಮ , ಆಶ್ಲೇಷ ಬಲಿ ಹಾಗೂ ಚಂಡಿಕಾ ಹೋಮ ನಡೆಸಿ ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಸಿ,ಮದ್ಯಾಹ್ನ 2 ರಿಂದ ಮಹಿಳಾ ಘಟಕದ ವಿವಿಧ ವಲಯಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಯಿತು. ಕಾರ್ಯಕ್ರಮದ ಯಶಸ್ಸಿಗೆ ಅನುಕೂಲವಾಗುವಂತೆ ವಿವಿಧ ಸಮಿತಿಗಳನ್ನು ರಚಿಸಿ ಸಂಚಾಲಕರು,ಸಹಸಂಚಾಲಕರು ಮತ್ತು ಸದಸ್ಯರನ್ನು ಸೇರ್ಪಡೆಗೊಳಿಸಲಾಯಿತು .
ವಿವಿಧ ಸಮಿತಿಗಳ ಪ್ರಧಾನ ಸಂಚಾಲಕರುಗಳಾಗಿ ರಾಮಕೃಷ್ಣ ಕಲ್ಲೂರಾಯ ಧರ್ಮಸ್ಥಳ.(ವೈದಿಕ ಸಮಿತಿ ), ಪರಾರಿ ವೆಂಕಟ್ರಮಣ ಹೆಬ್ಬಾರ್(ವ್ಯವಸ್ಥಾಪನಾ ಸಮಿತಿ ), ಶರತ್ ಕೃಷ್ಣ ಪಡುವೆಟ್ನಾಯ . ಉಜಿರೆ (ಸ್ವಾಗತ ಸಮಿತಿ), ಗಿರೀಶ ಕುದ್ರೆಂತ್ತಾಯ ಧರ್ಮಸ್ಥಳ.(ಆರ್ಥಿಕ ಸಮಿತಿ ), ಮುರಳೀಕೃಷ್ಣ ಆಚಾರ್ಯ ಉಜಿರೆ.(ವೇದಿಕೆ ಸಮಿತಿ ), ಸ್ವರ್ಣ ಶ್ರೀರಂಗ ನೂರಿತ್ತಾಯ ಉಜಿರೆ. (ಸಾಂಸ್ಕೃತಿಕ ಸಮಿತಿ ) , ಸುಬ್ರಹ್ಮಣ್ಯ ಬೈಪಡಿತ್ತಾಯ ಉಜಿರೆ.(ಆಹಾರ ಸಮಿತಿ), ಶ್ರೀಶ ಮುಚ್ಚಿನ್ನಾಯ ಬೆಳ್ತಂಗಡಿ. (ಸ್ವಯಂಸೇವಕ ಸಮಿತಿ), ಸಾಂತೂರು ಶ್ರೀನಿವಾಸ ತಂತ್ರಿ. ಉಜಿರೆ. (ಪ್ರಚಾರ,ಮಾಧ್ಯಮ ಸಮಿತಿ ) ಮತ್ತು ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಸಭಾಭವನದ ಉದ್ಘಾಟನೆಗೆ ಪರಮಪೂಜ್ಯ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಮತ್ತು ಮುಖ್ಯ ಅತಿಥಿಗಳಾಗಿ ಕಟೀಲು ಕ್ಷೇತ್ರದ ಅರ್ಚಕ ಹರಿನಾರಾಯಣದಾಸ ಆಸ್ರಣ್ಣರನ್ನು ಆಮಂತ್ರಿಸಲು ನಿರ್ಧರಿಸಲಾಯಿತು . ಅಂತೆಯೇ ಶ್ರೀ ಅಯ್ಯಪ್ಪ ಹಾಗೂ ಪರಿವಾರ ದೇವರ ಪುನಃ ಪ್ರತಿಷ್ಠೆ ಕಾರ್ಯಕ್ರಮಗಳನ್ನು ಮುಂದಿನ ಜನವರಿ ತಿಂಗಳ 26 ಮತ್ತು 27 ಕ್ಕೆ ನೆರವೇರಿಸಲು ದೈವಜ್ಞರ ಸೂಚನೆಯಂತೆ ನಿರ್ಣಯಿಸಲಾಯಿತು . ಸಮಿತಿಗಳ ಮುಂದಿನ ಕಾರ್ಯಯೋಜನೆಗಳ ಪ್ರಗತಿಯ ಕುರಿತು ಪ್ರತಿ ತಿಂಗಳು ಕಾರ್ಯಕಾರಿಣಿ ಸಭೆ ನಡೆಸಲು ಹಾಗೂ ಮುಂದಿನ ವಾರದಲ್ಲಿ ವಿವಿಧ ಸಮಿತಿಗಳ ಸಂಚಾಲಕರ ಸಭೆ ನಡೆಸುವುದೆಂದೂ ನಿರ್ಧರಿಸಿ,ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ ಅವರು ಸರ್ವರ ಸಹಕಾರ ಕೋರಿದರು.
ವೇದಿಕೆಯಲ್ಲಿ ತಾಲೂಕು ಉಪಾಧ್ಯಕ್ಷ ನಾಗೇಶ್ ರಾವ್ ಮುಂಡ್ರು ಪ್ಪಾಡಿ,ಕಾರ್ಯ ದರ್ಶಿ ರಾಜಪ್ರಸಾದ್ ಪೊಲ್ನಾಯ ,ಶ್ರೀ ಜನಾರ್ದನ ಸೊಸೈಟಿ ಅಧ್ಯಕ್ಷ ಗಂಗಾಧರ ರಾವ್ ಕೆವುಡೇಲು, ಪರಾರಿ ವೆಂಕಟ್ರಮಣ ಹೆಬ್ಬಾರ್, ಮಹಿಳಾ ಘಟಕಾಧ್ಯಕ್ಷೆ ಸ್ವರ್ಣ ಶ್ರೀರಂಗ ನೂರಿತ್ತಾಯ, ಶೋಭಾ ಸುರೇಶ ಉಪಸ್ಥಿತರಿದ್ದರು. ಕಟ್ಟಡ ಸಮಿತಿ ಗೌರವಾಧ್ಯಕ್ಷ ಶರತ್ ಕೃಷ್ಣ ಪಡುವೆಟ್ನಾಯ ಸ್ವಾಗತಿಸಿ,ಪ್ರಸ್ತಾವಿಸಿದರು. ರಾಜಪ್ರಸಾದ್ ಪೊಲ್ನಾಯ ವಂದಿಸಿದರು. ತಾಲೂಕಿನ ಸದಸ್ಯರು ವಿಚಾರ ವಿನಿಮಯ ನಡೆಸಿ ಅಭಿಪ್ರಾಯ ಮಂಡಿಸಿದರು.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…