News Karnataka Kannada
Monday, May 13 2024
ಮಂಗಳೂರು

ಬೆಳ್ತಂಗಡಿ: ರಸ್ತೆಯ ವಿವಾದ, ಎರಡು ಕುಟುಂಬಗಳ ಪರಸ್ಪರ ಹೊಡೆದಾಟ

Two families clash with each other over a road dispute
Photo Credit : News Kannada

ಬೆಳ್ತಂಗಡಿ: ನಡ ಗ್ರಾಮದ ದೇರ್ಲಕ್ಕಿ ಎಂಬಲ್ಲಿ ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ಸದಸ್ಯರು ಪರಸ್ಪರ ಹೊಡೆದಾಡಿಕೊಂಡು ಹಲವರು ಗಾಯಗೊಂಡ ಘಟನೆ ಭಾನುವಾರ ಸಂಭವಿಸಿದೆ.

ಇಲ್ಲಿನ ನಿವಾಸಿಗಳಾಗಿರುವ ಓಬಯ್ಯ ಗೌಡ ಹಾಗೂ ವಿಜಯ ಗೌಡ ಎಂಬವರ ಕುಟುಂಬಗಳ ಮದ್ಯೆ ಕಳೆದ 35 ವರ್ಷಗಳಿಂದ ರಸ್ತೆಯ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದವಿದ್ದು ಇದೇ ಕಾರಣಕ್ಕೆ ಎರಡೂ ಕುಟುಂಬಗಳ ಸದಸ್ಯರು ಭಾನುವಾರ ಕತ್ತಿ, ಹಾರೆ ಕೋಲುಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಎರಡೂ ಕುಟುಂಬದವರು ಇದೀಗ ಆಸ್ಪತ್ರೆಗೆ ದಾಖಲಾಗಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಓಬಯ್ಯ ಗೌಡ ಅವರು ನೀಡಿರುವ ದೂರಿನಂತೆ ಮನೆಗೆ ಹೋಗುವ ರಸ್ತೆಯನ್ನು ಚರಳು ಹಾಕಿ ಸರಿಮಾಡುತ್ತಿದ್ದ ವೇಳೆ ಅವರ ನೆರೆಮನೆಯಲ್ಲಿರುವ ಚಿಕ್ಕಪ್ಪ ಪೂವಪ್ಪ ಗೌಡ ಲಲಿತ, ವಿಜಯ ಗೌಡ, ಶ್ರೀನಿವಾಸ ಗೌಡ, ಕೃಷ್ಣಪ್ಪ ಗೌಡ ಅವರು ಅಲ್ಲಿಗೆ ಬಂದು ಮರದ ದೊಣ್ಣೆ, ಸರಳು, ಚೂರಿ, ಕಲ್ಲುಗಳಿಂದ ತಮ್ಮ ಮೇಲೆ ಹಾಗೂ ತಮ್ಮೊಂದಿಗಿದ್ದ ಬೇಬಿ ಗೌಡ, ಭವಾನಿ, ರಜನಿ, ಕೇಶವ ಗೌಡ, ಸುಧಾಕರ ಗೌಡ, ರವಿ ಗೌಡ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವುದಾಗಿ ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಿಸಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ವಿಜಯ ಗೌಡ ಅವರು ಈ ಬಗ್ಗೆ ದೂರು ನೀಡಿದ್ದು ವ್ಯಾಜ್ಯ ಇರುವ ತಮ್ಮ ತೋಟದ ನಡುವೆ ಹಾದು ಹೋಗುವ ರಸ್ತೆಗೆ ಬಂದ ಓಬಯ್ಯ ಗೌಡ ಹಾಗೂ ಇತರರು ತೋಟದ ನಡುವೆ ರಸ್ತೆ ಸಮತಟ್ಟು ಮಾಡಲು ಮುಂದಾಗಿದ್ದು ಇದನ್ನು ಪ್ರಶ್ನಿಸಿದ ತನ್ನ ಮೇಲೆ ಹಾಗೂ ಬೊಬ್ಬೆ ಕೇಳಿ ಮನೆಯಿಂದ ಬಂದ ಪೂವಪ್ಪ ಗೌಡ, ಲಲಿತ, ವಿಜಯ ಗೌಡ, ಶ್ರೀನಿವಾಸ ಗೌಡ,ಹಾಗೂ ಕೃಷ್ಣಪ್ಪ ಗೌಡ ಅವರ ಮೇಲೆ ಕಲ್ಲು ದೊಣ್ಣೆಗಳಿಂದ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ‌ ಈ ಬಗ್ಗೆಯೂ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದೀಗ ಎರಡೂ ಕಡೆಯವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು