News Karnataka Kannada
Sunday, April 28 2024
ಮಂಗಳೂರು

ಬೆಳ್ತಂಗಡಿ: ಬಸ್ ನಿಲ್ದಾಣದ ಸಮೀಪದ 2 ಅಂಗಡಿಗಳಲ್ಲಿ ಕಳ್ಳತನ

Two shops burgled near bus stand
Photo Credit : News Kannada

ಬೆಳ್ತಂಗಡಿ: ಬಸ್ ನಿಲ್ದಾಣದ ಸಮೀಪದ ಏಂಜಲ್ ಸ್ಟೋರ್ ಮತ್ತು ಗಿರಣಿ ಅಂಗಡಿಗೆ ನುಗ್ಗಿ ನಗದು ಕಳವು ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.

ಬೆಳ್ತಂಗಡಿ ಪೋಲಿಸ್ ಠಾಣೆಯ ಕಾಂಪೌಂಡ್ ಗೋಡೆಗೆ ತಾಗಿರುವ ಏಂಜಲ್ ಸ್ಟೋರ್ ಮತ್ತು ಗಿರಣಿ ಅಂಗಡಿಗೆ ಶನಿವಾರ ರಾತ್ರಿ ಕಳ್ಳರು ನುಗ್ಗಿದ್ದು , ಹಿಂಬದಿಯ ಕಿಟಕಿ ಮುರಿದು , ಕಬ್ಬಿಣದ ರಾಡ್ ಎಬ್ಬಿಸಿ ಒಳನುಗ್ಗಿ , ಡ್ರವರ್ ನಲ್ಲಿದ್ದ ಸುಮಾರು 25,000/- ರೂಪಾಯಿಗಳನ್ನು ಎಗರಿಸಿದ್ದಾರೆ. ಆದಿತ್ಯವಾರ ಬೆಳ್ತಂಗಡಿ ಅಂಗಡಿ ಬಾಗಿಲು ತೆರೆದಾಗ ಕಳವು ಕೃತ್ಯ ಬೆಳಕಿಗೆ ಬಂದಿದೆ ಎಂದು ಬೆಳ್ತಂಗಡಿ ಪೋಲಿಸರಿಗೆ ಅಂಗಡಿ ಮಾಲೀಕರಾದ ಆದರ್ಶ ಎ‌.ಜೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಸ್ಥಳಕ್ಕೆ ಬೆಳ್ತಂಗಡಿ ಪೋಲಿಸರು ಭೇಟಿ ನೀಡಿ , ಸ್ಥಳೀಯ ಸಿಸಿ ಕ್ಯಾಮರಾಗಳನ್ನು ಪರಿಶೀಲನೆ ನಡೆಸಿ , ತನಿಖೆ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು