News Karnataka Kannada
Thursday, May 02 2024
ಮಂಗಳೂರು

ಬೆಳ್ತಂಗಡಿ: ಬ್ಯೂಟಿ ಪಾರ್ಲರ್ ಮ್ಯಾನೇಜ್‍ಮೆಂಟ್ ತರಬೇತಿಯ ಸಮಾರೋಪ ಕಾರ್ಯಕ್ರಮ

Belthangady: Valedictory function of beauty parlour management training
Photo Credit :

ಬೆಳ್ತಂಗಡಿ: ನೀವು ಆಯ್ದ ಬ್ಯೂಟಿಪಾರ್ಲರ್ ಕ್ಷೇತ್ರದಲ್ಲಿ ಮಾಸ್ಟರ್ ಆಗುವ ಪ್ರಯತ್ನ ಮಾಡಿ, ನಿಮ್ಮ ಕುರಿತು ಚುಚ್ಚಿ ಮಾತನಾಡಿದವರೆ ಮೆಚ್ಚಿ ಮಾತನಾಡುವಂತೆ ಬೆಳೆಯಿರಿ ಎಂದು ಶ್ರೀ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್ ಕಾರ್ಯದರ್ಶಿ ವೀರು ಶೆಟ್ಟಿ ಅಭಿಪ್ರಾಯಪಟ್ಟರು.

ಅವರು ಉಜಿರೆಯಲ್ಲಿನ ರುಡ್‍ಸೆಟ್ ಸಂಸ್ಥೆಯಲ್ಲಿ ನಡೆದ 30 ದಿನಗಳ ಬ್ಯೂಟಿ ಪಾರ್ಲರ್ ಮ್ಯಾನೇಜ್‍ಮೆಂಟ್ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿದ್ದು ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿ‌ಸಿದರು.

ಜೀವನ ಪಾಠದ ಬೋಧನೆಯೆ ರುಡ್‍ಸೆಟ್ ಸಂಸ್ಥೆಯ ವಿಶೇಷತೆ. ಇಲ್ಲಿಂದ ಹೋಗಿ ಸಮಾಜದಲ್ಲಿ ಒಳ್ಳೆಯ ಪ್ರಜೆಗಳಾಗಿ ಉತ್ತಮ ಸಾಧಕರಾಗಿ ಎಂದು ಕಿವಿಮಾತು ಹೇಳಿದರು.

ರುಡ್‍ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ ಕಲ್ಲಾಪುರರವರು ಅಧ್ಯಕ್ಷ ಸ್ಥಾನದಿಂದ ಮಾತನಾಡಿ ಕಲಿತ ವಿದ್ಯೆಯಿಂದ ಸ್ವಾವಲಂಬಿಗಳಾಗಿ ಕುಟುಂಬಕ್ಕೆ ಹೆತ್ತವರಿಗೆ ಹೆಮ್ಮೆ ತರುವ ರೀತಿಯಲ್ಲಿ ಮುಂದೆ ಹೆಜ್ಜೆಯಿಡಿ ಎಂದರು. ರುಡ್‍ಸೆಟ್ ಸಂಸ್ಥೆಯ ನಿರ್ದೇಶಕ ಎಂ. ಸುರೇಶ್‍ವರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಅತಿಥಿ ಉಪನ್ಯಾಸಕಿ ಮಾಧವಿ ರೈ ರವರು ಅನಿಸಿಕೆ ವ್ಯಕ್ತಪಡಿಸಿದರು. ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರೆ ಉಪನ್ಯಾಸಕಿ ಅನಸೂಯ ವಂದಿಸಿದರು. 30 ದಿನಗಳ ಕಾಲ ನಡೆದ ಈ ತರಬೇತಿ ಕಾರ್ಯಕ್ರಮದಲ್ಲಿ 35 ಶಿಬಿರಾರ್ಥಿಗಳು ಭಾಗವಹಿಸಿ ತರಬೇತಿಯ ಪ್ರಯೋಜನ ಪಡೆದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು