ಬೆಳ್ತಂಗಡಿ: ಅನುಭವ, ಅನಿಸಿಕೆ ಮತ್ತು ಅಭಿಪ್ರಾಯಗಳ ವಿನಿಮಯದೊಂದಿಗೆ ತರಬೇತಿಯ ಗುಣಮಟ್ಟವನ್ನು ಸುಧಾರಿಸುವುದೇ ರುಡ್ಸೆಟ್ ಸಂಸ್ಥೆಗಳ ನಿರ್ದೇಶಕರುಗಳು ಮತ್ತು ನೌಕರರ ವಾರ್ಷಿಕ ಸಮಾವೇಶದ ಉದ್ದೇಶವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಶುಕ್ರವಾರ ಧರ್ಮಸ್ಥಳದಲ್ಲಿ “ಶ್ರೀ ಸನ್ನಿಧಿ” ಅತಿಥಿಗೃಹದಲ್ಲಿ ಎರಡು ದಿನ ನಡೆದ ರುಡ್ಸೆಟ್ ಸಂಸ್ಥೆಗಳ ನಿರ್ದೇಶಕರುಗಳು ಮತ್ತು ನೌಕರರುಗಳ ವಾರ್ಷಿಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. 1982ರಲ್ಲಿ ಉಜಿರೆಯಲ್ಲಿ ಶ್ರೀ ಸಿದ್ಧವನ ಗುರುಕುಲದಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಿದ ಅಲ್ಪಾವಧಿ ತರಬೇತಿ ನೀಡುವ ರುಡ್ಸೆಟ್ ಸಂಸ್ಥೆಗಳ ಸೇವೆ-ಸಾಧನೆ ರಾಷ್ಟ್ರಮಟ್ಟದಲ್ಲಿ ಇಂದು ಗುರುತಿಸಲ್ಪಟ್ಟಿದ್ದು ಸರ್ಕಾರದ ಮಾನ್ಯತೆಯನ್ನೂ ಹೊಂದಿದೆ. ನಿರುದ್ಯೋಗ ಸಮಸ್ಯೆ ನಿವಾರಣೆಯೊಂದಿಗೆ ಮಹಿಳಾ ಸಬಲೀಕರಣವೂ ಆಗಿದೆ. ಶೇಕಡಾ 73 ರಷ್ಟು ಮಹಿಳೆಯರು ಸ್ವ-ಉದ್ಯೋಗ ತರಬೇತಿ ಪಡೆದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ.
ಪ್ರಾದೇಶಿಕವಾಗಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಿದ್ದು ಸಂಸ್ಥೆಯ ನಿರ್ದೇಶಕರುಗಳು ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ ಪರಿಹರಿಸಿಕೊಳ್ಳಬೇಕು. ತರಬೇತಿಯ ಮಾದರಿ ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
27 ರುಡ್ಸೆಟ್ ಸಂಸ್ಥೆಗಳ ಮತ್ತು ಅದೇ ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 590 ಆರ್ಸೆಟಿಗಳು ಇಂದು ದೇಶದೆಲ್ಲೆಡೆ ಯುವಜನತೆಯ ಭರವಸೆಯ ಆಶಾಕಿರಣವಾಗಿ ಕಾರ್ಯನಿರ್ವಹಿಸುತ್ತಿವೆ. ಬೆಂಗಳೂರಿನಲ್ಲಿ ನಿರ್ಮಾಣಗೊಂಡಿರುವ ಆರ್ಸೆಟಿಯ ಸುಸಜ್ಜಿತ ನೂತನ ಕಟ್ಟಡವು ಇದೇ ಸೆಪ್ಟೆಂಬರ್ ತಿಂಗಳಿನಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಹೆಗ್ಗಡೆಯವರು ಪ್ರಕಟಿಸಿದರು. ಬೆಂಗಳೂರಿನಲ್ಲಿರುವ ಕೆನರಾ ಬ್ಯಾಂಕ್ ಪ್ರಧಾನ ಕಾರ್ಯಾಲಯದ ಹಿರಿಯ ಪ್ರಬಂಧಕ ಸಂಜೀತ್ ಕುಮಾರ್ ಶುಭಾಶಂಸನೆ ಮಾಡಿ, ಬ್ಯಾಂಕ್ ವತಿಯಿಂದ ರುಡ್ಸೆಟ್ ಸಂಸ್ಥೆಗಳಿಗೆ ಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಭುವನೇಶ್ವರ ರುಡ್ಸೆಟ್ ಸಂಸ್ಥೆಯ ನಿರ್ದೇಶಕ ಅರಬಿತ್ದಾಸ್, ಗಝಿಯಾಬಾದ್ ರುಡ್ಸೆಟ್ ಸಂಸ್ಥೆಯ ನಿರ್ದೇಶಕಿ ಸುಮನ್ ಲತಾ ಶರ್ಮಾ, ನಡಿಯಾಡ್ ರುಡ್ಸೆಟ್ ಸಂಸ್ಥೆಯ ನಿರ್ದೇಶಕ ಅಜಯ ಕುಮಾರ್ ಪಾಠಕ್ ಮತ್ತು ಮಧುರೈ ರುಡ್ಸೆಟ್ ಸಂಸ್ಥೆಯ ಹಿರಿಯ ತರಬೇತುದಾರರಾದ ವೀರರಾಘವನ್ ವಾರ್ಷಿಕ ಸಮಾವೇಶದ ಬಗ್ಯೆ ತಮ್ಮ ಅನಿಸಿಕೆ, ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ರುಡ್ಸೆಟ್ ಸಂಸ್ಥೆಗಳ ಕೇಂದ್ರೀಯ ಕಾರ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ ಕಲ್ಲಾಪುರ ಆರಂಭದಲ್ಲಿ ಸ್ವಾಗತಿಸಿ, ವರದಿ ಸಾದರ ಪಡಿಸಿದರು.
ಉತ್ತಮ ಸಾಧನೆ ಮಾಡಿದ ರುಡ್ಸೆಟ್ ಸಂಸ್ಥೆಗಳ ನಿರ್ದೇಶಕರುಗಳನ್ನು ಗೌರವಿಸಲಾಯಿತು. ಉಜಿರೆ ರುಡ್ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕಿ ಅನಸೂಯ ಕಾರ್ಯಕ್ರಮ ನಿರ್ವಹಿಸಿದರು.
ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…
ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್-ಕಣಗಿಲು ಜಾತಿಗೆ ಸೇರಿದ…
ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ ಬೀಗ…
ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.
ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…
ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ