ಬೆಳ್ತಂಗಡಿ: ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರ ಎತ್ತುವ ಸ್ಪರ್ಧೆಯಲ್ಲಿ ಕಂಚಿನ ಪದಕ ವಿಜೇತ ಉಜಿರೆ ಎಸ್ಡಿಎಂ ಕಾಲೇಜಿನ ಹಿರಿಯ ವಿದ್ಯಾರ್ಥಿ ಕುಂದಾಪುರದ ಗುರುರಾಜ್ ಪೂಜಾರಿ ಅವರನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಭಿನಂದಿಸಿ, ಗೌರವಿಸಿದರು.
ಕಾಮನ್ವೆಲ್ತ್ ಗೇಮ್ಸ್ನಿಂದ ತವರಿಗೆ ಬರುತ್ತಿದ್ದ ಗುರುರಾಜ್ ಪೂಜಾರಿ ಅವರನ್ನು ಧರ್ಮಾಧಿಕಾರಿ ಡಾ. ಹೆಗ್ಗಡೆಯವರು ದೆಹಲಿಯಿಂದ ಮಂಗಳೂರಿಗೆ ಬರುವ ಸಂದರ್ಭ ಮಂಗಳೂರು ಏರ್ಪೋರ್ಟ್ನಲ್ಲಿ ಕ್ಷೇತ್ರದ ಪರವಾಗಿ ಅಭಿನಂದಿಸಿ, ಆಶೀರ್ವದಿಸಿದರು.
ಈ ಸಂದರ್ಭ ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ.ಶೆಟ್ಟಿ ಮೊದಲಾದವರು ಇದ್ದರು.