ಬೆಳ್ತಂಗಡಿ: ವೇಣೂರು ಸನಿಹದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ನವೀಕರಣಕ್ಕಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾl ವೀರೇಂದ್ರ ಹೆಗ್ಗಡೆಯವರು ರೂ.5 ಲಕ್ಷ ದೇಣಿಗೆಯನ್ನು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಾಲಕೃಷ್ಣ ಭಟ್ ದಡ್ಡು ಅವರಿಗೆ ಹಸ್ತಾಂತರಿಸಿದರು.
ಸಮಿತಿ ಪ್ರಧಾನ ಕಾರ್ಯದರ್ಶಿ ಸತೀಶ್ ಉಜಿರ್ದಡ್ಡು, ಕಾರ್ಯಧ್ಯಕ್ಷ ಮಹೇಶ್ ಭಟ್ ಮೀಯಂದೂರು, ಕಾರ್ಯದರ್ಶಿ ಜಗದೀಶ್ ನಾಯಕ್, ಮಹಾವೀರ ಜೈನ್ ಮುಡುಕೋಡಿ ಗುತ್ತು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀಕೃಷ್ಣ ಭಟ್, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಮಹಾವೀರ ಅಜ್ರಿ ಉಪಸ್ಥಿತರಿದ್ದರು.