Categories: ಮಂಗಳೂರು

ಬೆಳ್ತಂಗಡಿ: ಮೃತ್ಯುಂಜಯ ಹಾಗೂ ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಭಾರೀ ಏರಿಕೆ

ಬೆಳ್ತಂಗಡಿ: ಮಂಗಳವಾರ ರಾತ್ರಿಯಿಂದ ಬುಧವಾರ ಇಡೀ ದಿನ ಬೆಳ್ತಂಗಡಿ ತಾಲೂಕಿನಾದ್ಯಂತ ಸಾಮಾನ್ಯ ಮಳೆ ನಿರಂತರವಾಗಿ ಸುರಿದಿದೆ. ನದಿಗಳು ತುಂಬಿ ಹರಿಯುವಷ್ಟು ಪ್ರಮಾಣದ ಮಳೆ ಇಲ್ಲದಿದ್ದರೂ ಮಂಗಳವಾರ ಮಧ್ಯಾಹ್ನದ ವೇಳೆ ಮತ್ತೆ ಮೃತ್ಯುಂಜಯ ಹಾಗೂ ನೇತ್ರಾವತಿ ನದಿಗಳಲ್ಲಿ ನೀರಿನ ಪ್ರಮಾಣದಲ್ಲಿ ಭಾರಿ ಪ್ರಮಾಣದ ಏರಿಕೆ ಕಂಡುಬಂತು. ಇದರಿಂದ ಅನೇಕ ಕಡೆ ಮರಮಟ್ಟುಗಳು, ವಿಪರೀತ ಮರಳಿನ ರಾಶಿ ಹರಿದು ಬಂದು ಆತಂಕ ಸೃಷ್ಟಿಸಿದೆ.

ಸುಮಾರು ಎರಡು ತಾಸುಗಳ ಬಳಿಕ ನೀರಿನ ಪ್ರಮಾಣ ಇಳಿಕೆಯಾಗ ತೊಡಗಿತು. ಈ ರೀತಿ ದಿಢೀರ್ ನೀರಿನ ಪ್ರಮಾಣ ಏರಿಕೆಗೆ ನದಿಗಳ ಉಗಮ ಸ್ಥಾನದ ಪರಿಸರದಲ್ಲಿ ಯಾವುದಾದರೂ ಗುಡ್ಡ ಕುಸಿತ ಉಂಟಾಗಿರುವ ಕುರಿತು ಸಂಶಯ ವ್ಯಕ್ತವಾಗಿದೆ. ಇದಕ್ಕೆ ಪೂರಕವೆಂಬಂತೆ ಬುಧವಾರವು ವಿಪರೀತ ಮಣ್ಣು ಮಿಶ್ರಿತ ನೀರು ನದಿಗಳಲ್ಲಿ ಹರಿದಿದೆ.

ಮೃತ್ಯುಂಜಯ ಹಾಗೂ ನೇತ್ರಾವತಿ ನದಿಗಳಲ್ಲಿ ಮಂಗಳವಾರ ಸಂಜೆ ಪ್ರವಾಹ ರೀತಿಯಲ್ಲಿ ನೀರು ಹರಿದ ಪರಿಣಾಮ 2019ರ ನೆರೆಪೀಡಿತ ಗ್ರಾಮಗಳ ಅಲ್ಲಲ್ಲಿ ಭಾರಿ ಹಾನಿಯೂ ಸಂಭವಿಸಿದೆ.

ಮೃತ್ಯುಂಜಯ ನದಿ ಹರಿಯುವ ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಣಪಾದೆ ಕಿರು ಸೇತುವೆ ಜಲಾವೃತವಾಗಿ ಭಾರಿ ಪ್ರಮಾಣದ ಮರಮಟ್ಟು,ತ್ಯಾಜ್ಯ ಸಂಗ್ರಹಗೊಂಡಿದೆ. ಇದರಿಂದ ಅರಣಪಾದೆ, ಅಂತರ,ಕೊಳಂಬೆ ಮೊದಲಾದ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಈ ಸೇತುವೆಯ ಸಂಪರ್ಕ ರಸ್ತೆ ಕೊಚ್ಚಿ ಹೋಗಿದ್ದು ವಾಹನ ಸಂಚಾರ ದುಸ್ತರಗೊಂಡಿದೆ.

ಅಂತರ ಪ್ರದೇಶದ ಉಮೇಶಗೌಡ, ಚಂದಯ್ಯ ಗೌಡ,ದರ್ಮಣ ಗೌಡ, ಅರುಣ ಗೌಡ, ಉದಯ ಗೌಡ,ರಂಜಿತ್ ಮೊದಲಾದವರ ತೋಟಗಳಿಗೆ ನದಿ ನೀರು ನುಗ್ಗಿ ಅಡಕೆ ಹಾಗೂ ಬಾಳೆ ಗಿಡಗಳಿಗೆ ಹಾನಿ ಸಂಭವಿಸಿದೆ. ಇಲ್ಲಿನ ಕೆಲವು ತೋಟಗಳಲ್ಲಿ ಮರಳು ಕೂಡ ಸಂಗ್ರಹಗೊಂಡಿರುವ ಕುರಿತು ಸ್ಥಳೀಯರು ತಿಳಿಸಿದ್ದಾರೆ. 2019ರ ನೆರೆಯಲ್ಲಿ ಈ ಪ್ರದೇಶಗಳ ತೋಟಗಳಿಗೆ ಮರಳು ನುಗ್ಗಿ ಹಲವಾರು ಎಕರೆ ಅಡಕೆ ತೋಟ ಸಂಪೂರ್ಣ ಹಾನಿಗೊಳಗಾದ ಬಳಿಕ ಹೊಸ ಕೃಷಿಯನ್ನು ಮಾಡಲಾಗಿದೆ. ಈ ಬಾರಿ ಮತ್ತೆ ಮರಳು ಬಂದು ಬಿದ್ದಿರುವುದು ಕೃಷಿಕರನ್ನು ತೀವ್ರ ಆತಂಕಕ್ಕೆ ತಳ್ಳಿದೆ.

ಮುಂಡಾಜೆಯ ಕಡಂಬಳ್ಳಿ ಕಿಂಡಿ ಅಣೆಕಟ್ಟಿನಲ್ಲಿ ಭಾರಿ ಮರಮಟ್ಟು ಸಂಗ್ರಹಗೊಂಡು ಮೃತ್ಯುಂಜಯ ನದಿಯ ನೀರು ಹರಿಯಲು ಅಡ್ಡಿ ಉಂಟಾಗಿ ಸಮೀಪದ ಮುಂಡ್ರುಪಾಡಿಯ ಅವಿನಾಶ ಗೋಖಲೆ, ವಾಸುದೇವ ಗೋಖಲೆ, ಶ್ರೀನಿವಾಸ ಗೋಖಲೆ, ಸಂಜೀವ ಶೆಟ್ಟಿ ಹಾಗೂ ಪ್ರದೇಶದ ಇನ್ನಿತರದ ಹಲವಾರು ಎಕರೆ ತೋಟಗಳಿಗೆ ನದಿ ನೀರು ನುಗ್ಗಿ ಭಾರಿ ಮರಮಟ್ಟು ಮತ್ತು ತ್ಯಾಜ್ಯ ಬಂದುಬಿದ್ದಿದೆ. ಅಲ್ಲದೆ ಈ ತೋಟಗಳಿಗೆ ಇತ್ತೀಚೆಗೆ ಲಕ್ಷಾಂತರ ರೂ.ವ್ಯಯಿಸಿ ಹಾಕಲಾಗಿದ್ದ ಗೊಬ್ಬರ, ಮಣ್ಣು ಇತ್ಯಾದಿ ನೀರು ಪಾಲಾಗಿದೆ.ಈ ಮರ ಮಟ್ಟು ತೆರವು ಗೊಳಿಸುವುದು ಸವಾಲಾಗಿ ಪರಿಣಮಿಸಿದೆ.

ಚಾರ್ಮಾಡಿ ಕಡೆಯಿಂದ ಮೃತ್ಯುಂಜಯ ನದಿಯಲ್ಲಿ ಅಕ್ರಮ ಮರಳುಗಾರಿಕೆಗೆ ಬಳಸುತ್ತಿದ್ದ ಮೂರು ದೋಣಿಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಕುರಿತು ಕಲ್ಮಂಜ ಪರಿಸರದ ನಾಗರಿಕರು ತಿಳಿಸಿದ್ದಾರೆ.

ನೇತ್ರಾವತಿ ನದಿಯ ಸಂಪರ್ಕದ ಮಲವಂತಿಗೆ ಗ್ರಾಮದ ಏಳೂವರೆ ಹಳ್ಳ ಪ್ರದೇಶದ ಕಕ್ಕೆನೇಜಿ, ನಾಗಗುಂಡಿ,ಕಲ್ಲೋಲೆ, ಮಾಪಲದಡಿ ಮೊದಲಾದ ಕಡೆಗಳಲ್ಲಿ ಹಳ್ಳದ ತಡೆಗೋಡೆಗಳಿಗೆ ತೀವ್ರ ಪ್ರಮಾಣದ ಹಾನಿ ಉಂಟಾಗಿರುವ ಕುರಿತು ವರದಿಯಾಗಿದೆ. ಇಲ್ಲಿನ ಪರಿಸರದ ಅನೇಕ ತೋಟಗಳಿಗೆ ನೀರು ನುಗ್ಗಿ ಅಲ್ಲಲ್ಲಿ ತ್ಯಾಜ್ಯದ ರಾಶಿ ಬಂದು ಬಿದ್ದಿದೆ. ಮಲವಂತಿಗೆ ಪಂಚಾಯಿತಿ ಅಧ್ಯಕ್ಷೆ ಸುರೇಖಾ,ಉಪಾಧ್ಯಕ್ಷ ವಿನಯ ಚಂದ್ರ ಸೇನರಬೆಟ್ಟು ಹಾಗೂ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Gayathri SG

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

39 mins ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

56 mins ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

1 hour ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

2 hours ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

2 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

2 hours ago