ಬೆಳ್ತಂಗಡಿ; ಮುಂಡಾಜೆ ಗ್ರಾಮಕ್ಕೆ ಪ್ರತ್ಯೇಕ 5 ಎಕ್ರೆ ಸರಕಾರಿ ಕ್ರೀಡಾಂಗಣ ಬೇಕು ಎಂಬುದಾಗಿ ಸೆ.20 ರಂದು ಪುತ್ತೂರು ಸಹಾಯಕ ಆಯುಕ್ತ (ಎ.ಸಿ) ಗಿರೀಶ್ ನಂದನ್ ಅವರನ್ನು ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಮೂಲಕ ಭೇಟಿ ಮಾಡಿ ಮಾತುಕತೆ ನಡೆಸಲಾಯಿತು.
ಎರಡು ವರ್ಷಗಳ ಹಿಂದೆಯೇ ಕ್ರೀಡಾ ಸಂಘದ ಮೂಲಕ ಗ್ರಾಮ ಸಭೆಯಲ್ಲಿ ಅರ್ಜಿ ನೀಡಿ ಸದ್ರಿ ಅರ್ಜಿ, ಜಿಲ್ಲಾಧಿಕಾರಿ ಮತ್ತು ಯುವಜನ ಸೇವಾ ಕ್ರೀಡಾ ಇಲಾಖೆಗೆ ಈಗಾಗಲೇ ಸಲ್ಲಿಕೆಯಾಗಿದೆ. ಗ್ರಾಮದ ಸರ್ವೆ ನಂಬ್ರ 200 ರ ಪೈಕಿ ಯಲ್ಲಿ (ನವೋದಯ ವಸತಿ ಶಾಲೆಯ ಪಕ್ಕದಲ್ಲಿ) ಸರಕಾರಿ ಜಾಗ ಗುರುತಿಸುವಂತೆ ಮೇಲಧಿಕಾರಿಯಿಂದ ಈಗಾಗಲೇ ತಹಶಿಲ್ದಾರ್ ಅವರಿಗೆ ಪತ್ರ ಬಂದಿದ್ದು, ಅದರ ಪ್ರತಿಯನ್ನೂ ಇಟ್ಟು ಇಂದು ಎ.ಸಿ ಅವರ ಗಮನಸೆಳೆಯಲಾಯಿತು.
ಮನವಿಗೆ ಸ್ಪಂದಿಸಿದ ಎ.ಸಿ ಅವರು ಸ್ಥಳದಲ್ಲೇ ಇದ್ದ ತಹಶಿಲ್ದಾರ್ ಪೃಥ್ವಿ ಸಾನಿಕಮ್ ಅವರಿಗೆ ಸೂಚನೆ ನೀಡಿ, ಗ್ರಾಮ ಕರಣಿಕರ ಮೂಲಕ ಜಾಗ ಗುರುತಿಸಿ ಕೂಡಲೇ ಕಡತ ತಯಾರಿಸಿ ಮಂಜೂರಾತಿಗೆ ಸಲ್ಲಿಸುವಂತೆ ನಿರ್ದೇಶಿಸಿದರು.
ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಅಧ್ಯಕ್ಷ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರ ಜೊತೆ ನಿಯೋಗದಲ್ಲಿ ಸಂಚಾಲಕ ನಾಮದೇಸ ರಾವ್, ಸಲಹಾ ಸಮಿತಿ ಸದಸ್ಯ ಬಾಬು ಪೂಜಾರಿ ಕೂಳೂರು ಉಪಸ್ಥಿತರಿದ್ದರು.
ಜೂನಿಯರ್ ಎನ್ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…
ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…
17ನೇ ಆವೃತ್ತಿಯ ಐಪಿಎಲ್ನ ಕೊನೆಯ ಲೀಗ್ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ತಂಡಗಳು ಈ…
ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್ಸ್ಕಿನ್ ಇರುವವರೂ…
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…