Categories: ಮಂಗಳೂರು

ಬೆಳ್ತಂಗಡಿ: ಬ್ಯಾನರ್ ಕಟ್ಟುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಯುವಕ ಸಾವು

ಬೆಳ್ತಂಗಡಿ: ಬ್ಯಾನರ್ ಕಟ್ಟುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಯುವಕನೋರ್ವ ಮೃತ ಪಟ್ಟ ಘಟನೆ ಮಂಗಳವಾರ ಸಂಜೆ ಇಲ್ಲಿನ ಬಸ್ ನಿಲ್ದಾಣ ಬಳಿ ನಡೆದಿದೆ. ಜತೆಯಲ್ಲಿದವರೊಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೃತ ಪಟ್ಟವರನ್ನು ಬೆಳ್ತಂಗಡಿ ಕಸಬಾದ ಸಂಜಯನಗರ ನಿವಾಸಿ ಪ್ರಶಾಂತ್ ಆಚಾರ್ಯ (40) ಎಂದು ಗುರುತಿಸಲಾಗಿದೆ. ಮಲೆಬೆಟ್ಟು ನಿವಾಸಿ ಸತೀಶ್ ಎಂಬುವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರ್ಯಕ್ರಮವೊಂದರ ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ, ಆಘಾತದಿಂದ ಪ್ರಶಾಂತ್ ನೆಲಕ್ಕೆ ಬಿದ್ದಿದ್ದು ತಕ್ಷಣ ಬೆಳ್ತಂಗಡಿ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಪ್ರಶಾಂತ್ ರಿಕ್ಷಾ ಚಾಲಕನಾಗಿದ್ದು ಪತ್ನಿ, ಮೂರು ವರ್ಷದ ಮಗು, ಇಬ್ಬರು ಸಹೋದರಿಯರು,ಒರ್ವ ಸಹೋದರನನ್ನು ಅಗಲಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Gayathri SG

Recent Posts

ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ: ಇಬ್ಬರು ಪೊಲೀಸರ ವಶಕ್ಕೆ

13 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

6 mins ago

ನಾಳೆ ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶಕ್ಕೆ ದಿನಾಂಕ ನಿಗದಿಯಾಗಿದ್ದು, ನಾಳೆ ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

21 mins ago

ಭಾರೀ ಮಳೆಗೆ ಬೈಕ್​ ಮೇಲೆ ಉರುಳಿ ಬಿದ್ದ ಮರ: ವ್ಯಕ್ತಿ ಮೃತ್ಯು

ರಾತ್ರಿ ಸುರಿದ ಭಾರೀ ಮಳೆಗೆ ಚಲಿಸುತ್ತಿದ್ದ ಬೈಕ್​ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲೇ ಸವಾರ ಸಾವನ್ನಪ್ಪಿರುವ ಘಟನೆ ಕೋಲಾರ…

35 mins ago

ಕಾರಿನ ಮೇಲೆ ಹರಿದ ಲಾರಿ​ : 6 ಮಂದಿ ಸಾವು

ರಾಜಸ್ಥಾನದ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ಯಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ್ದಾರೆ.

36 mins ago

ಇಂದು (ಮೇ ೦8) ವಿಶ್ವ ರೆಡ್ ಕ್ರಾಸ್ ದಿನಾಚರಣೆ

ವಿಶ್ವ ರೆಡ್ ಕ್ರಾಸ್ ದಿನವನ್ನು ವಿಶ್ವದಾದ್ಯಂತ ಮೇ 8ರಂದು ಆಚರಿಸಲಾಗುತ್ತದೆ. ಸ್ವಿಸ್ ಉದ್ಯಮಿ ಮತ್ತು ವಿಶ್ವದ ಅತಿದೊಡ್ಡ ಮಾನವೀಯ ನೆರವು…

49 mins ago

ಡಿಕೆಶಿ ವಿರುದ್ಧ ಜೆಡಿಎಸ್‌-ಬಿಜೆಪಿ ಬೃಹತ್‌ ಪ್ರತಿಭಟನೆ

ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರದಲ್ಲಿ ಬುಧವಾರ ಡಿಸಿಎಂ ಡಿ.ಕೆಶಿವಕುಮಾರ್‌ ಬೃಹತ್‌ ಪ್ರತಿಭಟನೆ ನಡೆಸಲಾಗಿದೆ. ರಾಮನಗರದ ಐಜೂರು…

54 mins ago