ಬೆಳ್ತಂಗಡಿ: ಸ್ನೇಹಿತರ ಜತೆ ಪುಣ್ಯಕ್ಷೇತ್ರ ದರ್ಶನಕ್ಕೆ ಬರುತ್ತಿದ್ದ ವೇಳೆ ಚಾರ್ಮಾಡಿ ಘಾಟಿ ಪರಿಸರದಲ್ಲಿ ಎದೆನೋವು ಕಾಣಿಸಿ ಕೊಂಡ ಯುವಕ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಘಟನೆ ವರದಿಯಾಗಿದೆ.
ಬೆಂಗಳೂರು ಪೀಣ್ಯದ ವಿನಯ್ ಬಿ(28)ಮೃತ ಪಟ್ಟ ಯುವಕನಾಗಿದ್ದಾನೆ. ಎದೆನೋವು ಕಾಣಿಸಿ ಕೊಂಡ ಕೂಡಲೇ ಸ್ನೇಹಿತರಾದ ಜೇಂಕಾರ್ ಮತ್ತು ವರದರಾಜು ವಿನಯ್ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದು ಕೊಂಡು ಹೋಗಿ ಅಲ್ಲಿಂದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆ ಹೃದಯಾಘಾತದಿಂದ ಮೃತ ಪಟ್ಟಿರುವುದಾಗಿ ಹೇಳಲಾಗಿದೆ.
ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಮೃತ ಯುವಕನ ತಂದೆ ಬೆಟ್ಟಸ್ವಾಮಿ ದೂರು ದಾಖಲಿಸಿದ್ದಾರೆ.