ಮಂಗಳೂರು: ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ರಿಕ್ಟರ್ ಮಾಪಕದಲ್ಲಿ 1.8 ತೀವ್ರತೆಯ ಭೂಕಂಪನ ದಾಖಲಾಗಿದೆ.
ಕೆ ಎಸ್ ಎನ್ ಡಿ ಎಂ ಸಿ ಅಂಕಿಅಂಶಗಳ ಪ್ರಕಾರ, ಈ ಭೂಕಂಪದ ಕೇಂದ್ರಬಿಂದುವು ಸುಳ್ಯ ತಾಲೂಕಿನ ಅರಂತೋಡು ಗ್ರಾಮ ಪಂಚಾಯತ್ ನ ವ್ಯಾಪ್ತಿಯಲ್ಲಿದೆ.
ಈ ಗಡಿ ಪ್ರದೇಶದ ಅನೇಕ ಹಳ್ಳಿಗಳಲ್ಲಿ ಭೂಕಂಪನದ ಕಂಪನದ ಅನುಭವವಾಗಿದೆ.
ಕಳೆದ ಕೆಲವು ದಿನಗಳಿಂದ, ದಕ್ಷಿಣ ಕನ್ನಡ ಮತ್ತು ಕೊಡಗಿನ ಗಡಿ ಪ್ರದೇಶವು ಪದೇ ಪದೇ ಸೆಸ್ಮಿಕ್ ಚಟುವಟಿಕೆಗಳಿಗೆ ಸಾಕ್ಷಿಯಾಗುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು. ಮಳೆ, ಪ್ರವಾಹ ಮತ್ತು ಭೂಕುಸಿತಗಳು ಸ್ಥಳೀಯ ನಿವಾಸಿಗಳ ಭಯವನ್ನು ಹೆಚ್ಚಿಸುತ್ತಿವೆ.