ಮಂಗಳೂರು

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ “ವಿಜಯ ಸಂಕಲ್ಪ ಅಭಿಯಾನ”

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಇದೇ ಜ 21ರಿಂದ ಜನವರಿ 29ರ ವರೆಗೆ ವಿಜಯ ಸಂಕಲ್ಪ ಅಭಿಯಾನವನ್ನು ಆಯೋಜಿಸಿದ್ದು, ಸರಣಿ ಕಾರ್ಯಕ್ರಮಗಳ ಮೂಲಕ ಜನಸಾಮಾನ್ಯರನ್ನು ತಲುಪಲಿದೆ.

ಈ ಕಾರ್ಯಕ್ರಮಕ್ಕೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾಜಿ ಅವರು ವಿಜಯಪುರದ ಸಿಂಧಗಿಯಲ್ಲಿ ಅಭಿಯಾನಕ್ಕೆ, ಚಾಲನೆ ಕೊಡಲಿದ್ದಾರೆ. ಮುಖ್ಯಮಂತ್ರಿ. ಬಸವರಾಜ ಬೊಮ್ಮಾಯಿ, ನಿಕಟಪೂರ್ವ ಸಿಎಂ ಮತ್ತು ಮಾರ್ಗದರ್ಶಕರಾದ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಅವರು ಜ. 21ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬೆಳ್ತಂಗಡಿ ಮಂಡಲದಲ್ಲಿ ಈ ಮಹಾಶಕ್ತಿಕೇಂದ್ರ ಮಟ್ಟದಲ್ಲಿ 8 ಬೂತ್ ಗಳಲ್ಲಿ ಜ.21 ರಂದು ಶಾಸಕರು, ವಿಧಾನ ಪರಿಷತ್‌ ಸದಸ್ಯರು ಸೇರಿ ಉದ್ಘಾಟನೆ ಮಾಡಲಿದ್ದಾರೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದೊಂದು ಸರ್ವಸ್ಪರ್ಶಿ ಕಾರ್ಯಕ್ರಮವಾಗಿದ್ದು, ಬಿಜೆಪಿಯನ್ನು ಗೆಲುವಿನ ಉತ್ತುಂಗಕ್ಕೆ ಕೊಂಡೊಯ್ಯುವಲ್ಲಿ ನಮ್ಮ ಮಂಡಲದಲ್ಲಿ 8 ಮಹಾಶಕ್ತಿಕೇಂದ್ರ 85 ಶಕ್ತಿಕೇಂದ್ರದ 241 ಬೂತ್‌ಗಳಲ್ಲಿ ಈ ವಿಜಯ ಸಂಕಲ್ಪ ಅಭಿಯಾನದ ಮೂಲಕ ನಮ್ಮ ಕಾರ್ಯಕರ್ತರು ತಲುಪುತ್ತಾರೆ. ಕೇಂದ್ರ- ರಾಜ್ಯ ಸರಕಾರಗಳ ಮತ್ತು ಸ್ಥಳೀಯ ಶಾಸಕರ ಸಾಧನೆಗಳ ಕುರಿತು ಕರಪತ್ರಗಳನ್ನು ಹಂಚಿಕೆ ಮಾಡಲಾಗುವುದು. 2ಲಕ್ಷದ 22 ಸಾವಿರದ 144 ಮನೆಗಳಿಗೆ 50 ಸಾವಿರ ಕುಟುಂಬಗಳಿಗೆ 6 ಸಾವಿರ ಪೇಜ್ ಪ್ರಮುಖರ ಮುಖಾಂತರ ಅವರ ಮನೆಮನೆಗೆ ತೆರಳಿ ಕರಪತ್ರ ಹಂಚಲಿದ್ದು ಫಲಾನುಭವಿಗಳನ್ನು ಮಾತನಾಡಿಸಿ ಬಿಜೆಪಿ ಸರಕಾರಗಳ ಯೋಜನೆಗಳಿಂದ ಈ ಕುಟುಂಬಗಳ ಸಬಲೀಕರಣ ವಾಹನಗಳ ಮೇಲೆ ಸ್ಟಿಕರ್ ಹಾಕಿಸುವ ಕೆಲಸವೂ ನಡೆಯಲಿದೆ.

ಜ. 21ರಿಂದ ಅಭಿಯಾನದ ಆರಂಭ ಆಗಲಿದ್ದು – ಅದಕ್ಕಾಗಿ ಈಗಾಗಲೇ ವ್ಯವಸ್ಥಿತವಾಗಿ ಪೂರ್ವಭಾವಿ ಸಿದ್ಧತೆ ನಡೆದಿವೆ, ಜಿಲ್ಲಾ ಮತ್ತು ಮಂಡಲಗಳಲ್ಲಿ ಸಭೆಗಳು ನಡೆಸಿ ಭಾರತೀಯ ಜನತಾ ಪಕ್ಷ ಮುಂಬರುವ ಚುನಾವಣೆಯಲ್ಲಿ 150 ಸ್ಥಾನಗಳನ್ನು ಪಡೆಯುವ ಗುರಿ ಹಾಕಿಕೊಂಡಿದೆ ಅದಕ್ಕಾಗಿ ಪಕ್ಷವು ತಳಹಂತದಿಂದ ಪಕ್ಷ ಸೇರಿ ವಿವಿಧ ಕಾರ್ಯತಂತ್ರಗಳನ್ನು ಮಾಡುತ್ತಿದೆ. ‘ಡಬಲ್ ಎಂಜಿನ್ ಸರ್ಕಾರಗಳ ಯೋಜನೆಗಳ ಫಲಾನುಭವಿಗಳ ಸಂಖ್ಯೆ ರಾಜ್ಯದಲ್ಲಿ ಒಂದು ಕೋಟಿಗೂ ಅಧಿಕ ಇದ್ದು, ಆ ಪಟ್ಟಿ ತಯಾರಿಸಲಾಗಿದೆ. ಫಲಾನುಭವಿಗಳನ್ನು ಸಂಪರ್ಕಿಸುವ ಕಾರ್ಯವನ್ನು ಪಕ್ಷದ ಕಾರ್ಯಕರ್ತರು ತಳಮಟ್ಟದಿಂದ ಮಾಡಲಿದ್ದಾರೆ. ಇದಲ್ಲದೆ ಮನೆಮನೆಗೆ ಕರಪತ್ರ ಹಂಚುವುದು, ಬಿಜೆಪಿ ಪಕ್ಷದ ಸ್ಟಿಕರ್ ಹಚ್ಚಲು ಪ್ರೇರೇಪಿಸುವುದು, ಗೋಡೆಗಳ ಮೇಲೆ ಬಿಜೆಪಿ ಸಾಧನೆ ಬಿಂಬಿಸುವ ಪೇಂಟಿಂಗ್ ಹಾಗೂ ಸದಸ್ಯತ್ವ ಅಭಿಯಾನ ಈ ಅಭಿಯಾನದ ಭಾಗವಾಗಿದೆ ಕ್ಷೇತ್ರ ಕಾರ್ಯಾಚರಣೆಗೆ ಇಳಿಯಲಿರುವ ರಾಜ್ಯ ಜಿಲ್ಲಾ ಹಾಗೂ ಮಂಡಲಗಳಲ್ಲಿ ಸಂಸದರು, ಶಾಸಕರು, ವಿಧಾನಪರಿಷತ್‌ ಸದಸ್ಯರು ಹಾಗೂ ಎಲ್ಲಾ ಚುನಾಯಿತ ಪ್ರತಿನಿಧಿಗಳು ಸರ್ಕಾರದ ಸಾಧನೆಗಳನ್ನು ಒಳಗೊಂಡ ಕರಪತ್ರಗಳನ್ನು ಸುಮಾರು ಒಂದು ಕೋಟಿ ಮನೆಗಳಿಗೆ ಹಂಚುವ ಗುರಿ ಹಾಕಿಕೊಂಡಿದ್ದಾರೆ. ಫಲಾನುಭವಿಗಳನ್ನು ಗುರುತಿಸುವುದರ ಜತೆಗೆ ಅವರಿಗೆ ಫಲಾನುಭವಿ ಪತ್ರವನ್ನೂ ವಿತರಿಸಲಾಗುತ್ತದೆ. ಸಾಮಾಜಿಕ ಜಾಲತಾಣಗಳ ಮೂಲಕವೂ ನಮ್ಮ ಯೋಜನೆಗಳ ಯಶಸ್ಸನ್ನು ಸಾರಲಾಗುವುದು. ಈ ಅಭಿಯಾನದ ಅವಧಿಯಲ್ಲಿ ಒಂದು ಕೋಟಿ ಹೊಸ ಸದಸ್ಯರು ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.

ಸದಸ್ಯತ್ವ ಅಭಿಯಾನ ಸಂಪೂರ್ಣ ಆನ್‌ಲೈನ್ ಇರಲಿದ್ದು (ಮಿಸ್ಡ್ ಕಾಲ್), ನೋಂದಣಿಯಾದ ಸದಸ್ಯರ ಸಂಖ್ಯೆಯನ್ನು ವೆಬ್‌ಸೈಟಿನಲ್ಲಿ ನೇರವಾಗಿ ನೋಡಬಹುದು. ನೋಂದಣಿ ಪ್ರಕ್ರಿಯೆ ಬಗೆಗೂ ಕಾರ್ಯಕರ್ತರಿಗೆ ಕಾರ್ಯಾಗಾರಗಳನ್ನು ನಡೆಸಲಾಗುತ್ತದೆ. ಈ ತಿಂಗಳ ಜನವರಿ 29 ‘ಮನ್ ಕೀ ಬಾತ್’ ಕಾರ್ಯಕ್ರಮ ಕರ್ನಾಟಕದ ಪಾಲಿಗೆ ಮತ್ತಷ್ಟು ವಿಶೇಷವಾಗಿರಲಿದೆ. ಪಕ್ಷದ ಕಾರ್ಯಕರ್ತರು ಹಾಗೂ ಪುಮುಖರು ಒಟ್ಟಿಗೇ ಕೂತು ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮ ಆಲಿಸಲಿದ್ದಾರೆ. ಬೂತ್ ಮಟ್ಟದಿಂದಲೇ ಇದು ನಡೆಯಲಿದ್ದು ಶೇ 90ರಷ್ಟು ಬೂತ್‌ಗಳು ಮನ್ ಕೀ ಬಾತ್ ಆಲಿಸಿ ದಾಖಲೆ ಮಾಡಲಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್ ಮತ್ತು ಗಣೇಶ್ ಗೌಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Gayathri SG

Recent Posts

ಬಸ್ ಹತ್ತುವಾಗ ಆಯಾತಪ್ಪಿ ಬಿದ್ದ ಮಹಿಳೆ : ಚಕ್ರಕ್ಕೆ ಸಿಲುಕಿ ಸಾವು

ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…

10 mins ago

ಉಳುಮೆ ವೇಳೆ ಟ್ರ‍್ಯಾಕ್ಟರ್ ಗೆ ಸಿಲುಕಿ 8 ವರ್ಷದ ಬಾಲಕ ಸಾವು

ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್‌ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.

16 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್‌

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…

31 mins ago

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

47 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

1 hour ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

1 hour ago