ಮಂಗಳೂರು: ಮಹಾನಗರ ಪಾಲಿಕೆಯ ಬೆಂಗ್ರೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 5 ವರ್ಷಗಳ ಅವಧಿಯಲ್ಲಿ ಶಿಕ್ಷಣ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸರಕಾರದಿಂದ ಸಾಕಷ್ಟು ಅನುದಾನ ತರಲಾಗಿದೆ. ಸರಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ ಕೆಲಸ ಕಾರ್ಯಗಳು ನಡೆಯುತ್ತಿದೆ ಎಂದು ಹೇಳಿದರು.
ಬೆಂಗ್ರೆ ಸರಕಾರಿ ಶಾಲೆಯಲ್ಲಿ ಕೊಠಡಿಗಳ ನಿರ್ಮಾಣಕ್ಕಾಗಿ 28 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಿದ್ದು, ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ. ಈ ಭಾಗದ ಸಾರ್ವಜನಿಕರ ಬೇಡಿಕೆಯಂತೆ ಬೆಂಗ್ರೆ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಮತ್ತಷ್ಟು ಅನುದಾನ ಒದಗಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾರ್ಪೋರೇಟರ್ ಸುನಿತಾ, ಮುಖಂಡರಾದ ಸುರೇಂದ್ರ ಪಾಂಗಳ, ಹೇಮಚಂದ್ರ, ಗಂಗಾಧರ ಸಾಲ್ಯಾನ್, ಲೋಕೇಶ್ ಬೆಂಗ್ರೆ, ಸಂಜಯ್ ಸುವರ್ಣ, ಮಹೇಶ್ ವಿ.ಕೆ, ಕೇಶವ ಗುರಿಕಾರ, ರಾಕೇಶ್, ರಮೇಶ್, ಶಾಲಾ ಮುಖ್ಯ ಶಿಕ್ಷಕಿ ಉಮಾಲಕ್ಷ್ಮಿ, ಶಾಲಾ ಸಿಬ್ಬಂದಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.